-
-40%
ಸಾಹಿತ್ಯಲೋಕದ ಸುತ್ತ-ಮುತ್ತ
0ಸಾಹಿತ್ಯಲೋಕದ ಸುತ್ತ–ಮುತ್ತ :
(ಪ್ರಸಂಗಗಳು)ತುಂಬಾ ಗಂಭೀರ ಧಾಟಿಯ ನಿಷ್ಠುರ ವಿಮರ್ಶಕರೆಂದೇ ಪ್ರಸಿದ್ಧರಾಗಿರುವ ಗಿರಡ್ಡಿ ಗೋವಿಂದರಾಜರ ವ್ಯಕ್ತಿತ್ವ ಮತ್ತು ಬರವಣಿಗೆಯ ಮತ್ತೊಂದು ಮುಖ್ಯ ಆಯಾಮವನ್ನು ತೋರುವ ಕೃತಿ ”ಸಾಹಿತ್ಯ ಲೋಕದ ಸುತ್ತ–ಮುತ್ತ ”. ಪಠ್ಯ ಕೇಂದ್ರಿತ ವಿಮರ್ಶಕ ಈಗ ಪಠ್ಯದ ಸುತ್ತಮುತ್ತಲೂ ನೋಡುತ್ತಿದ್ದಾನೆ. ತನ್ನ ಗಮನಕ್ಕೆ ಬಂದ ಸ್ವಾರಸ್ಯಕರ ಸಂಗತಿಗಳನ್ನು ಪೂರ್ವ ಗ್ರಹಗಳಿಲ್ಲದೆ ಆಸ್ವಾದಿಸುತ್ತಾ ಅವುಗಳನ್ನು ಇತರ ಸಾಹಿತ್ಯಾಸಕ್ತರಿಗೂ ದಾಟಿಸುತ್ತಿದ್ದಾನೆ. ಈ ಪುಸ್ತಕವನ್ನು ‘ಪ್ರಸಂಗಗಳು‘ ಎಂದು ಕರೆದಿರುವುದು ಉಚಿತವಾಗಿಯೇ ಇದೆ. ಸಾಹಿತ್ಯ, ರಂಗಭೂಮಿಗಳನ್ನು ಹತ್ತಿರದಲ್ಲಿ ಬಲ್ಲ ಗಿರಡ್ಡಿಯವರು ಪ್ರಸಂಗ‘ಗಳ ಹಲವು ಮಾದರಿಗಳನ್ನು ಇಲ್ಲಿ ಲವಲವಿಕೆ ಇಂದ ನಿರೂಪಿಸಿದ್ದಾರೆ.ಈ ಪ್ರಸಂಗಗಳಲ್ಲಿ ಕೆಲವು ಸಾಂದರ್ಭಿಕ ಹಾಸ್ಯ, ಸಂದಿಗ್ಧತೆ ಮತ್ತು ಅವುಗಳ ಅನಿರೀಕ್ಷಿತತೆಗಳಿಂದ ಮುದಗೊಳಿಸಿದರೆ, ಮತ್ತೆ ಕೆಲವು ಪರಿಚಿತ ಲೇಖಕರ ಅಪರಿಚಿತ ಮುಖಗಳನ್ನು ಕಾಣಿಸಿ ಬೆಚ್ಚಿಬೀಳಿಸುವಂತಿದೆ. ಮತ್ತೆ ಕೆಲವು ಸಾಹಿತ್ಯ ಚರಿತ್ರೆಯ ಭಾಗಗಳಾಗಿಯೂ ಮುಖ್ಯವೆನಿಸುತ್ತದೆ. ಸಾಹಿತ್ಯ ಲೋಕದ ಸುತ್ತಮುತ್ತ ಹಬ್ಬಿರುವ ಗಾಸಿಪ್ಪುಗಳಿಗೆ ಮತ್ತಷ್ಟು ಬಣ್ಣ ತುಂಬುವ ಕೆಲಸವನ್ನಿ ಇಲ್ಲಿ ಗಿರಡ್ಡಿ ಮಾಡ ಹೊರಟಿಲ್ಲ. ಸಾಹಿತ್ಯ ಸಂಶೋಧಕರಂತೆ ಕೆಲವು ವದಂತಿಗಳ ಜಾಡು ಹಿಡಿದು ಇತರ ವ್ಯಕ್ತಿಗಳಿಂದ ಸಾಕ್ಷ್ಯಗಳನ್ನು ಕಲೆಹಾಕಿ, ಕೆಲವೊಮ್ಮೆ ಲಿಖಿತ ದಾಖಲೆಗಳನ್ನು ಸಂಗ್ರಹಿಸಿ, ಅವುಗಳನ್ನು ಅನಗತ್ಯ ಗೋಜಲುಗಳಿಂದ ಮುಕ್ತಗೊಳಿಸಲು ಶ್ರಮಿಸಿದ್ದಾರೆ.
-
-40%
ಭಾಷಾಂತರ : ಸೈದ್ಧಾಂತಿಕ ಹಾಗೂ ಆನ್ವಯಿಕ ನೆಲೆಗಳು
0ಭಾಷಾಂತರ : ಸೈದ್ಧಾಂತಿಕ ಹಾಗೂ ಆನ್ವಯಿಕ ನೆಲೆಗಳು
ಕಳೆದ ಎರಡು–ಮೂರು ದಶಕಗಳಲ್ಲಿ ಪಾಶ್ಚಿಮಾತ್ಯ–ಭಾರತೀಯ ವಿಶ್ವ ವಿದ್ಯಾಲಯಗಳಲ್ಲಿ ಭಾಷಾಂತರವನ್ನು ಕುರಿತು ಅಗಾಧ ಚಿಂತನೆ ನಡೆದಿದೆ; ಭಾಷಾಶಾಸ್ತ್ರೀಯ, ವಸಾಹತೋತ್ತರ, ಸ್ತ್ರೀವಾದಿ, ಜಾನಾಂಗಿಕ, ಇತ್ಯಾದಿ ನೆಲೆಗಳಲ್ಲಿ ಭಾಷಾಂತರಕ್ರಿಯೆಯ ಸ್ವರೂಪ ಹಾಗೂ ಪರಿಣಾಮಗಳನ್ನು ಕುರಿತು ಅನೇಕ ಸ್ವೋಪಜ್ಞ ಸಿದ್ಧಾಂತಗಳು ಮೂಡಿ ಬಂದಿವೆ. ಅವುಗಳಲ್ಲಿ, ನನಗೆ ಮಹತ್ವಪೂರ್ಣವಾದ ಕೆಲವು ಸೈದ್ಧಾಂತಿಕ ಧಾರೆಗಳನ್ನು ಇಲ್ಲಿ ಪರಿಚಯಿಸಲಾಗಿದೆ.
-
-40%
ಸೊನಾಟಾ
0ಸೊನಾಟಾ –
ಪಾಶ್ಚಾತ್ಯ ಸಂಗೀತದಲ್ಲಿ ಪಿಯನೋದಂಥಹ ಏಕ ವಾದ್ಯಕ್ಕಾಗಿ ಅಥವಾ ಅದರ ಜೊತೆಗೆ ಹೆಚ್ಚೆಂದರೆ ಪಿಟೀಲು – ಚೆಲೋದಂಥಹ ಒಂದು ತಂತು ವಾದ್ಯಕ್ಕಾಗಿ ರಚಿಸಿರುವ ಬೃಹತ್ ಗಾತ್ರದ ಕೃತಿ. (ಮರಾಠಿಯಲ್ಲಿ ‘ಸನ್ನಾಟಾ‘ ಎಂದರೆ ‘ಸ್ಮಶಾನ ಮೌನ‘ ಎಂದರ್ಥ.)
ಈ ನಾಟಕದ ಮೂಲ ಮರಾಠಿ ಲೇಖಕರು ಶ್ರೀ ಮಹೇಶ ಎಲಕುಂಚವಾರ . ಕನ್ನಡ ಅನುವಾದ ಶ್ರೀ ಗಿರೀಶ ಕಾರ್ನಾಡ -
-40%
ಕುವೆಂಪು : ಯುಗದ ಕವಿ
0ಕುವೆಂಪು ಅವರ ವ್ಯಕ್ತಿತ್ವದ ಮೂಲನೆಲೆಯಾಗಿ ಆಧ್ಯಾತ್ಮಿಕತೆ, ಅವರ ಬರವಣಿಗೆಯು ಸ್ಥಳೀಯ ಮತ್ತು ವೈಶ್ವಿಕಗಳನ್ನು ಹೆಣೆಯುವ ಬಗೆ, ಅವರು ಲೌಕಿಕ ಮತ್ತು ಆಗಮಿಕಗಳ ನಡುವೆ ಸಾಧಿಸಿರುವ ಸಹಯೋಗದ ಸ್ವರೂಪ, ಅವರ ನಾಟಕಗಳ ಸಮಕಾಲೀನತೆ ಮತ್ತು ಸಾಮಾಜಿಕತೆ, ಕಾದಂಬರಿಗಳ ದಾರ್ಶನಿಕ ನೆಲೆಗಟ್ಟು ಮುಂತಾದ ಸಂಗತಿಗಳು ಇಲ್ಲಿ ಹೊಸ ಆಯಾಮಗಳನ್ನು ಪಡೆದುಕೊಂಡಿವೆ.
-
-40%
ಬೆಂದ ಕಾಳು ಆನ್ ಟೋಸ್ಟ್
0ಬೆಂದ ಕಾಳು ಆನ್ ಟೋಸ್ಟ್
ಒಂದು ಆಖ್ಯಾಯಿಕೆಯ ಪ್ರಕಾರ ಅರಸ ವೀರ ಬಲ್ಲಾಳ ಬೇಟೆಗೆಂದು ಹೊರಟವನು ಕಾಡಿನಲ್ಲಿ ದಾರಿ ತಪ್ಪಿ, ರಾತ್ರಿಯಿಡೀ ಸುತ್ತಾಡಿ ಹಸಿದು ಬಳಲಿ ಬಸವಳಿದಾಗ, ಒಬ್ಬ ಮುದುಕಿ ಅವನಿಗೆ ಬೆಂದ ಕಾಳುಗಳನ್ನು ನೀಡಿ ಅವನ ಪ್ರಾಣ ಉಳಿಸಿದಳು. ಆ ಉಪಕಾರವನ್ನು ಸ್ಮರಿಸಿ ಅರಸ ಆ ಸ್ಥಾನದಲ್ಲಿ ‘ಬೆಂದಕಾಳೂರು’ ಎಂಬ ಊರನ್ನು ಸ್ಥಾಪಿಸಿದ. ಅದೇ ಮುಂದೆ ‘ಬೆಂಗಳೂರು’ ಆಯಿತು.
-
-40%
ಮದುವೆಯ ಆಲ್ಬಮ್
0ಮದುವೆಯ ಆಲ್ಬಮ್
– ನಾಟಕ –
ಮದುವೆಯ ಅಲ್ಬಮ್ ಸಮಕಾಲೀನ ಜೀವನದ ಬಗ್ಗೆ ಗಿರೀಶ ಕಾರ್ನಾಡ ಅವರು ಬರೆದ ನಾಟಕ. ಇದರಲ್ಲಿರುವುದು ಸಮಕಾಲೀನ ಸಂವೆದನೆಯೇ ಹೊರತು ವಿಷಯವಲ್ಲ ಎಂದು ಗಿರೀಶ ಕಾರ್ನಾಡರ ಅಭಿಪ್ರಾಯ.
‘ಮದುವೆಯ ಆಲ್ಬಮ್’ ನಾಟಕದ ಮೊದಲನೆಯ ಪ್ರಯೋಗವನ್ನು Prime Time Theatre Company ಅವರು ಇಂಗ್ಲಿಷ್ ನಲ್ಲಿ Wedding Album ಎಂಬ ಹೆಸರಿನಲ್ಲಿ ಮುಂಬಯಿಯ National Centre for the Performing Arts ಅವರ ಟಾಟಾ ನಾಟ್ಯಗೃಹದಲ್ಲಿ ಶನಿವಾರ ೧೦ಮೇ ೨೦೦೮ರಂದು ಸಾದರಪಡಿಸಿದರು. -
-40%
ಆಗೊಮ್ಮೆ ಈಗೊಮ್ಮೆ
0ಆಗೊಮ್ಮೆ ಈಗೊಮ್ಮೆ
(ಗದ್ಯ ಲೇಖನಗಳ ಸಂಗ್ರಹ)
ಇದೊಂದು ಭಾಷಣಗಳು, ಲೇಖನಗಳು ಮತ್ತು ವ್ಯಕ್ತಿ ಚಿತ್ರಗಳ ಸಂಕಲನ. ಇದರಲ್ಲಿ ಗಿರೀಶ ಕಾರ್ನಾಡ ಅವರು ಕಳೆದ ಐದು ದಶಕಗಳಲ್ಲಿ ಬೇರೆ ಬೇರೆ ವೇದಿಕೆಗಳಲ್ಲಿ ಮಾಡಿದ 11 ಭಾಷಣಗಳು, ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳು ಮತ್ತು 6 ವ್ಯಕ್ತಿಚಿತ್ರಗಳು ಸೇರಿವೆ.
-
-40%
ಅದ್ದ್ಯಾ
0ಅದ್ದ್ಯಾ
ಅದ್ದ್ಯಾ ಎಂಬ ನಾಮನಿರ್ದೇಶನಗಳಿಲ್ಲದ ವ್ಯಕ್ತಿಯು ತನ್ನದಲ್ಲದ ಬೇರೆಯವರ ಮನೆಯಲ್ಲಿ ಬದುಕಿ ಆ ಮನೆಯ ಸುಃಖ ದುಃಖಗಳಲ್ಲಿ ತಾನೂ ಭಾಗಿಯಾಗಿ ತಾನು ಜೀವನದಲ್ಲಿ ಕಲಿತ ಪಾಠಗಳನ್ನು ಆ ಮನೆಯ ಮಕ್ಕಳಿಗೆ ಕಲಿಸಿ ಅವರ ಜೀವನವನ್ನು ರೂಪಿಸಿದ ಚಿತ್ರ. ತಾನು ಸಮರ್ಪಿಸಿಕೊಂಡ ಮನೆಗೆ ತನ್ನನ್ನು ಸೀಮಿತಗೊಳಿಸಿಕೊಂಡು ಮನೆಯ ಸಂಸ್ಕೃತಿಗೆ ತಾನೂ ಭಾಗೀದಾರಳಾಗಿ ಅದಕ್ಕೆ ತನ್ನ ಕೊಡುಗೆಯನ್ನು ಇತ್ತವಳು ಈ ಅದ್ದ್ಯಾ. ಅದ್ದ್ಯಾ ತನ್ನ ಮೇರೆಯಲ್ಲಿನ ಸಮಾಜದ ಭಾಷೆ ನೀತಿ ನಿಲುವುಗಳನ್ನು ನಿರ್ದೇಶಿಸುವ ಜೀವ. ಆದ್ದರಿಂದ ಇದು ಒಮ್ಮೆ ನಾವು ಕಳಕೊಂಡ ತಿರುಗಿ ಮರಳಿ ಬಾರದ ಸಂಸ್ಕೃತಿಯ ಚಿತ್ರವೆಂದರೂ ಸರಿ. -
-40%
ಹಿಡಿಯದ ಹಾದಿ
0ಹಿಡಿಯದ ಹಾದಿ
(ಲಲಿತ ಪ್ರಬಂಧಗಳು)
ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು, ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.