-
-40%
ನೆನಪಿನಂಗಳದಲ್ಲಿ ಮುಸ್ಸಂಜೆ ಹೊತ್ತು
0ಸಮೃದ್ಧ ಅನುಭವ ಸುತ್ತಲಿನ ಜಗತ್ತಿನಲ್ಲಿ ಲವಲವಿಕೆಯ ಆಸಕ್ತಿಯಿರುವ ಮನುಷ್ಯ ನಿರೂಪಿಸಿದ ಪುಸ್ತಕಗಳಲ್ಲಿ ‘ನೆನಪಿನಂಗಳದಲ್ಲಿ ಮುಸ್ಸಂಜೆ ಹೊತ್ತು’ ಒಂದು. ಈ ಪುಸ್ತಕದ ಬರಹದಲ್ಲಿ ನಯ ನಾಜೂಕು, ಕಲೆ ಇಲ್ಲ. ನೇರವಾಗಿ ನಿರೂಪಣೆ. ಅನುಭವದಿಂದ ಎದ್ದು ಬಂದ ಚಿಂತನೆ. ಕಾರಂತರ ಅಪೂರ್ವ ಪ್ರಾಮಾಣಿಕತೆಯ ಶ್ರದ್ಧಾವಂತ ಜೀವನದ ಪರಿಚಯವಾಗುತ್ತದೆ.
ಅಪೂರ್ವಜೀವನದ ನೆನಪುಗಳನ್ನು ನಮಗೆ ಒದಗಿಸುವ ಪುಸ್ತಕ. ‘ಸಮಾಜದ ಋುಣ ಹೇಗೆ ತೀರಿಸಿಯೇನು?’ ಎಂದು ಬಹುಶಃ ಕೋ.ಲ.ಕಾರಂತರು ಹೇಳಿಕೊಂಡರೆ ಅದು ಅವರ ಹಿರಿತನವನ್ನು ತೋರಿಸುತ್ತದೆ.
ವೈದೇಹಿಯವರ ಸುಂದರ ನಿರೂಪಣೆ ಇದಾಗಿದೆ.
-
-40%
ಮನಸುಖರಾಯನ ಮನಸು
0ಮನಸುಖರಾಯನ ಮನಸು :
(ಕತೆ – ಹರಟೆ)
ಇದರಲ್ಲಿರುವ ಆರು ಲೇಖನಗಳಲ್ಲಿ ‘‘ಬಾಶಿಂಗ ಬಲ’’ ‘‘ತ್ರಯಸ್ಥ’’ ಹಾಗೂ ‘‘ಗಧೇ ಪಂಚವೀಶಿ’’ ಇವು ಮೂರು ಕಥಾ ರೂಪಿ ಹರಟೆಗಳು. ‘‘ಗಾಯಕವಾಡ ದಾದಾ’’ ಹರಟೆ ರೂಪಿ ವ್ಯಕ್ತಿ ಚಿತ್ರಣ; ‘‘ಶ್ರದ್ಧಾ’’ ಒಂದು ಬಾಲ್ಯಕಾಲದ ಚಿತ್ರಣ. ‘‘ಪುಸ್ತಕದ ಹುಳ’’ ಒಂದು ಶುದ್ಧ ತಲೆಹರಟೆ ರೂಪಿ ಹರಟೆ……………. -
-40%
ನಾ ಬದುಕಲಿಕ್ಕೆ ಒಲ್ಲೆಪಾ
0ನಾ ಬದುಕಲಿಕ್ಕೆ ಒಲ್ಲೆಪಾ
ಇದು ದ್ವಿಪಾತ್ರ ನಾಟಕಗಳ ಸಂಕಲನ. ದ್ವಿಪಾತ್ರ ನಾಟಕಗಳಿಗೆ ಸಂಭಾಷಣೆಯೇ ಜೀವಾಳ . ಸಂಭಾಷಣೆ ಮೂಲಕವೇ ಕುತೂಹಲವನ್ನು ಹುಟ್ಟಿಸುವ ತಂತ್ರಗಾರಿಕೆಯೇ ನಾಟಕದ ಮೂಲ ವಸ್ತು. ಯಾವುದೇ ಒಂದು ಸಮಸ್ಯೆಯನ್ನು ಎದುರಿಗಿಟ್ಟುಕೊಂಡು ಅದರ ಪರ ಮತ್ತು ವಿರೋಧದ ವಾಗ್ವಾದದ ಮೂಲಕವೇ ನಾಟಕವನ್ನು ರಚಿಸುವ ಜಾಣಕಲಾತ್ಮಕಯೇ ನಾಟಕಕಾರಣನ ಹಿರಿಮೆ. ಈ ನಿಟ್ಟಿನಲ್ಲಿ ಲೋಹಿತ ನಾಯ್ಕರ್ ಯಶಸ್ವಿಯಾಗಿದ್ದಾರೆ.
ಈ ನಾಟಕಗಳು ಹವ್ಯಾಸಿ ರಂಗಭೂಮಿಗೆ ಸೂಕ್ತವಾಗಿವೆ. -
-38%
ಹಯವದನ
0ಹಯವದನ
ಶ್ರೀ ಗಿರೀಶ ಕಾರ್ನಾಡರ ‘ಹಯವದನ’ ನಾಟಕವು ಎಪ್ಪತ್ತರ ದಶಕದಲ್ಲಿ ಅವರು ಹೋಮಿಭಾಭಾ ಫೆಲೋಶಿಪ್ ಪಡೆದು ಧಾರವಾಡದಲ್ಲಿದ್ದಾಗ ಬರೆದದ್ದು. ಈ ನಾಟಕಕ್ಕೆ ರಾಷ್ಟ್ರಮಟ್ಟದ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿಯೂ ದೊರಕಿದೆ. ಶ್ರೀ ಸತ್ಯದೇವ ದುಬೆ, ಬಿ.ವಿ. ಕಾರಂತರಂಥ ನಿರ್ದೇಶಕರಿಂದ ಅನೇಕ ಪ್ರದರ್ಶನಗಳನ್ನು ಕಂಡಿದೆ. ಶ್ರೀ ದುಬೆಯವರ ಹಿಂದೀ ಪ್ರದರ್ಶನದಲ್ಲಿ ಶ್ರೀ ಅಮೋಲ ಪಾಲೇಕರ, ದಿ. ಅಮರೀಶಪುರಿ ಶ್ರೀಮತಿ ಸುನೀತಾ ಪ್ರಧಾನ ಮುಂತಾದವರು ಪಾತ್ರವಹಿಸಿ, ಈ ನಾಟಕದ ಪ್ರದರ್ಶನ ಅತ್ಯಂತ ಯಶಸ್ವಿಯಾಗಲು ಮತ್ತು ಬಹುಕಾಲ ಜನರ ಮನಸ್ಸಿನಲ್ಲಿ ಬೇರೂರಲು ಕಾರಣವಾಯಿತು. -
-40%
ಟಿಪೂ ಸುಲ್ತಾನ ಕಂಡ ಕನಸು
0ಟಿಪೂ ಸುಲ್ತಾನ ಕಂಡ ಕನಸು
1997 ರಲ್ಲಿ ಭಾರತೀಯ ಸ್ವಾತಂತ್ರ್ಯಕ್ಕೆ ಐವತ್ತು ತುಂಬಿದ ಸಂದರ್ಭದಲ್ಲಿ ಇಂಗ್ಲೆಂಡಿನ ಬಿ.ಬಿಸಿ. ರೇಡಿಯೋದವರು ನನಗೆ ಸ್ವಾತಂತ್ರ್ಯ ದಿನಂದು ಬಿತ್ತರಿಸಲಿಕ್ಕಾಗಿ ಒಂದು ನಾಟಕ ಬರೆದುಕೊಡಲು ಕೇಳಿಕೊಂಡರು. ನಾಟಕದ ವಸ್ತು ಆಂಗ್ಲ-ಭಾರತೀಯ ಸಂಬಂಧವನ್ನು ಕುರಿತದ್ದಾಗಿರಬೇಕು ಎಂಬ ಮಾತು ಸೂಚ್ಯವಾಗಿ ಬಂದಾಗ ನನಗೆ ಕೂಡಲೆ ಹೊಳೆದದ್ದು ಕರ್ನಾಟಕದ ಕೊನೆಯ ಸ್ವತಂತ್ರ ಶಾಸಕನಾದ ಟಿಪೂ ಸುಲ್ತಾನನ ದುರಂತ! ತನ್ನ ಇಡಿಯ ಬಾಳನ್ನು ಬಡಿದಾಟದಲ್ಲೇ ನೀಗಿಸಿದ ಈ ವ್ಯಕ್ತಿ ಗುಟ್ಟಾಗಿ ತನ್ನ ಕನಸುಗಳನ್ನು ಬರೆದಿಡುತ್ತಿದ್ದ ಎಂಬ ಮಾತನ್ನು ಏ.ಕೆ.ರಾಮಾನುಜನ್ರಿಂದ ಕೇಳಿದಂದಿನಿಂದ ನನಗೆ ಟಿಪೂವಿನಲ್ಲಿ ವಿಶೇಷ ಆಸಕ್ತಿ ಉಂಟಾಗಿತ್ತು. ಅದೇ ನಾಟಕ ರಚನೆಗೆ ಪ್ರೇರಣೆಯಾಯಿತು. -
-40%
ಪಾಚಿ ಕಟ್ಟಿದ ಪಾಗಾರ
0ಪಾಚಿ ಕಟ್ಟಿದ ಪಾಗಾರ
(ಕಾದಂಬರಿ)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಬದುಕನ್ನು ಕಣ್ಣಿಗೆ ಕಟ್ಟುವಂತೆ ಕಾದಂಬರಿಗಾರ್ತಿ ಮಿತ್ರಾ ವೆಂಕಟರಾಜ ಈ ಕಾದಂಬರಿಯಲ್ಲಿ ಬರುವ ಪಾತ್ರಗಳು ಜೀವನದಲ್ಲಿ ಎದುರಾಗುವ ಘಟನೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಮತ್ತು ಹಳ್ಳಿಯಲ್ಲಿ ಪ್ರಮುಖವಾಗಿರುವ ಕುಟುಂಬಗಳ ರೀತಿ ನೀತಿಗಳ ಇತರ ಸಾಧಾರಣ ಕುಟುಂಬಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತವೆ ಎಂಬುದನ್ನು ಸವಿವರವಾಗಿ ಚಿತ್ರಿಸಲಾಗಿದೆ. ಮಿತ್ರಾ ವೆಂಕಟರಾಜ ಅವರು ಎರಡು ಭಾಗಗಳಲ್ಲಿ ಕಾದಂಬರಿಯ ಒಟ್ಟು ಜೀವನದ ಪರಂಪರೆ ಅಳಿಸಿಹೋಗದಹಾಗೆ ಚಿತ್ರಿಸಿ ಮುಂದಿನ ತಲೆಮಾರಿಗೆ ದಾಖಲೆ ಉಳಿಸಿದ್ದಾರೆ. -
-40%
ಸತ್ತು ಹುಟ್ಟಿದ್ದು
0ಸತ್ತು ಹುಟ್ಟಿದ್ದು
(ವೈದ್ಯಕೀಯ ರೋಮಾಂಚಕಾರಿ ಕಾದಂಬರಿ)
ಇದು ಶ್ರೀಮತಿ ರೋಹಿಣಿ ನಿಲೇಕಣಿ ಅವರ ಪೆಂಗ್ವಿನ್ ಪ್ರಕಾಶಕರಿಂದ ಇಂಗ್ಲೀಷನಲ್ಲಿ “ಸ್ಟಿಲ್ ಬಾರ್ನ್” ಎಂಬ ಹೆಸರಿನಲ್ಲಿ ಪ್ರಕಟವಾಗಿದ್ದು ಇದನ್ನು ಆರ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. -
ಕಾವ್ಯಸಿಂಧು
0ಯಾವುದೇ ಅಬ್ಬರ, ಆರ್ಭಟಗಳಿಲ್ಲದ ಈ ‘ಕಾವ್ಯಸಿಂಧು’ ವೆಂಬ ಶಾಂತಿ ಸಾಗರದ ತಡಿಯಲ್ಲಿ ನಿಂತು ನೋಡಿದಾಗ ಇಲ್ಲಿಯ ಎಲ್ಲ ರಚನೆಗಳೂ ರಮ್ಯಗೀತಗಳಾಗಿದ್ದು ಸಂಗೀತ ಸಹಚರಿಗಳಾಗಿವೆ. ಇದರಲ್ಲಿಯ ಭಾವಗಳ ಪ್ರಾಮುಖ್ಯತೆಯ ಹಿನ್ನೆಲೆಯಲ್ಲಿ ಕವಿ ಭಾವಗೀತೆಗಳು, ಭಕ್ತಿ ಗೀತೆಗಳು, ಪ್ರೇಮಗೀತೆಗಳು, ದೇಶಭಕ್ತಿ ಗೀತೆಗಳು ಮತ್ತು ಹಬ್ಬ ಹರಿದಿನಗಳ ಕುರಿತಾದ ಗೀತೆಗಳೆಂಬ ಐದು ವಿಭಾಗಗಳಾಗಿ ವಿಂಗಡಿಸಿಟ್ಟಿದ್ದಾರೆ.
-
-40%
ತುಘಲಕ್
0ಇದು ಗಿರೀಶ ಕಾರ್ನಾಡರ ಎರಡನೆಯ ನಾಟಕ. ಈ ನಾಟಕದ ಕಥಾವಸ್ತು ಐತಿಹಾಸಿಕವಾಗಿದ್ದರೂ ಇದರ ಉದ್ದೇಶ ಇತಿಹಾಸದ ಚಿತ್ರಣವಲ್ಲ. ತುಘಲಕ್ ವಂಶದ ಹುಚ್ಚ ಮುಹಮ್ಮದನ ಅರಾಜಕತೆಯ ಆಳ್ವಿಕೆಯೇ ನಾಟಕದ ಕಾರ್ಯಪರಂಪರೆಯಗಿದ್ದರೂ ತೋರಿಸುವ ಕೃತಿಯಲ್ಲ. ಮನುಷ್ಯ ದೇವತ್ವದ ಕನಸನ್ನು ಕಾಣುವ ಪಶುವಾಗಿರುವದೇ ಇಲ್ಲಿಯ ಮೂಲಭೂತವಾದ ಸಮಸ್ಯೆಯಾಗಿದೆ. ಈ ಸಮಸ್ಯೆ ಹುಟ್ಟಿಸುವ ಅನೇಕ ಮಾನವೀಯ ಅನರ್ಥಗಳಿಗೆ ಮುಹಮ್ಮದ ಪ್ರಳಯ ಕೇಂದ್ರವಾಗಿದ್ದಾನೆ.
-
ಎಲ್ಲಿಯೂ ಸಲ್ಲಲಿಲ್ಲ
0ಎಲ್ಲಿಯೂ ಸಲ್ಲಲಿಲ್ಲ
ಈ ನಾಟಕವು ನರಸಿಂಹ ಹಿರಣ್ಯಕಶಿಪು, ದೇವತೆಗಳು, ಇವರಾರದೂ ಪೌರಾಣಗಳ ಕತೆಯಲ್ಲ. ಆದ್ದರಿಂದ ನಡೆಯುವ ಪ್ರಸಂಗಗಳಿಗೆ ಪೌರಾಣಗಳ ದೃಷ್ಟಿಯಿಂದ ಲಾಜಿಕ್ ಇರುವುದಿಲ್ಲ. ದೇವಲೋಕ ಅಂಥದೊಂದಿದ್ದರೆ ಮತ್ತು ಮನುಷ್ಯಲೋಕ ಇವುಗಳ ನಡುವಿನ ಕೊಂಡು ಕಳಚಿದವೆನಿಸಿದಾಗ ನಾಟಕ ನಡೆಯುವದು. ದೇವತೆಗಳು, ನಾಟಕ ಆಡೂವವಳು, ಅದರ ಹೊರಗಿನವರು ಹೀಗೆ ಮೂಲಸ್ತರಗಳಲ್ಲಿ ಪ್ರಹಸನ ನಡೆಯುತ್ತದೆ. ಇದು ನಾಟಕದ ವಸ್ತು. ಪೂರ್ಣ ನಾಟಕ ನಡೆದಾಗ ಏನೇನಾಗುವದೋ ಅದೇ ನಾಟಕದ ಕತೆ.