- -10%
ತಂತ್ರಯೋನಿ
0Original price was: ₹375.00.₹338.00Current price is: ₹338.00.ತಂತ್ರಯೋನಿ :
‘ತಂತ್ರಯೋನಿ’ ಗ್ರಂಥ ತಂತ್ರದ ಶಾಸ್ತ್ರವನ್ನು ಕುರಿತು ವಿವರವಾಗಿ ಹೇಳುತ್ತದೆ. ತಂತ್ರ ಒಂದು ರಹಸ್ಯವಿದ್ಯೆ. ಈ ವಿದ್ಯೆಯನ್ನು ಗುರುವಿನಿಂದ ಪಡೆಯಲು ಶಿಷ್ಯ ಅಧಿಕಾರಿಯಾಗಿರಬೇಕು. ‘ಅಶಿಷ್ಯಾಯ ನ ದೇಯಂ’ ಎನ್ನುವದು ಇಂಥ ವಿದ್ಯೆಗಳಿಗೆ ಒಂದು ನಿಷೇಧವಾಕ್ಯ. ದೀಕ್ಷೆ, ಧ್ಯಾನ, ಜಪ, ಮಂತ್ರ ಮೊದಲಾದವುಗಳು ಕೂಡ ತಂತ್ರವಿದ್ಯೆಯ ಅಂಗಗಳಾಗಿರುವುದರಿಂದ ಅವುಗಳನ್ನು ಕುರಿತು ಸಾಕಷ್ಟು ವಿವರಗಳನ್ನು ಈ ಗ್ರಂಥದಲ್ಲಿ ನೀಡಲಾಗಿದೆ.
- -10%
ಮುಖಾಂತರ
0Original price was: ₹550.00.₹495.00Current price is: ₹495.00.ಮುಖಾಂತರ
‘ಮುಖಾಂತರ’ ಸಾವಧಾನದ ಲಯದಲ್ಲಿ ನಿರೂಪಿತವಾಗಿರುವ ಕಾದಂಬರಿ. ಇತ್ತೀಚೆಗೆ ಅಪರೂಪವಾಗುತ್ತಿರುವ ಈ ಲಯವೇ ಈ ಕಾದಂಬರಿಯ ಆಶಯ ಆಕೃತಿಯನ್ನು ರೂಪಿಸಿದೆ. ಹೀಗಾಗಿ ವೇಗಕ್ಕೆ ದಕ್ಕದ ಅನೇಕ ಸೂಕ್ಷ್ಮಗಳು ಈ ಕಾದಂಬರಿಯ ಬಂಧದಲ್ಲಿ ಸಹಜವೆಂಬಂತೆ ಸೇರಿಕೊಂಡಿವೆ. ದಟ್ಟ ಜೀವನಾನುಭವದ ಹೆಣಿಗೆಯಲ್ಲಿ ಸಿದ್ಧವಾಗಿರುವ ‘ಮುಖಾಂತರ’ದಲ್ಲಿ ಮೊಗಸಾಲೆಯವರು ಒಂದು ಕುಟುಂಬದ ಕತೆಯನ್ನು ಹೇಳುತ್ತಲೇ ನಾಡಿನ ಜಗತ್ತಿನ ವಿದ್ಯಮಾನಗಳನ್ನು ಹಾಸು ಹೊಕ್ಕಾಗಿ ಸೇರಿಸಿದ್ದಾರೆ. ಸ್ಥಳೀಯ ಸತ್ವವನ್ನು ಒಳಗೊಳ್ಳುತ್ತಲೇ ಜಾಗತಿಕ ಆಗು ಹೋಗುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ‘ಮುಖಾಂತರ’ದ ವಿಸ್ತಾರ ಬೆರಗು ಮೂಡಿಸುತ್ತದೆ.
ಸಂಬಂಧಗಳ ಜಟಿಲತೆ, ಸ್ತ್ರೀ ಜಗತ್ತಿನ ತಲ್ಲಣಗಳು, ಆಸ್ತಿ ಅಧಿಕಾರದ ದರ್ಪ, ಅಂತಃಕರಣ ಜಗತ್ತಿನ ಆರ್ದ್ರತೆ. ಜಾಗತೀಕರಣ ಕಬಂಧ ಬಾಹು, ಆಕಸ್ಮಿಕಗಳು ಬದುಕನ್ನು ರೂಪಿಸುವ ವಿಸ್ಮಯ, ವರ್ಗ ಸಂಘರ್ಷ ಅನಿಯಂತ್ರಿತ ಆಕರ್ಷಣೆಯ ಸ್ವರೂಪ. ಈ ಎಲ್ಲವನ್ನೂ ಮೀರಿದ ನಿರ್ಲಿಪ್ತತೆ ಹೀಗೆ ಹಲವು ನೆಲೆಗಳನ್ನು ಒಳಗೊಂಡಿದೆ. - -10%
ಹೂವು, ಒಡಕಲು ಬಿಂಬ ಮತ್ತು ಇತರ ನಾಟಕಗಳು
0Original price was: ₹70.00.₹63.00Current price is: ₹63.00.ಹೂವು, ಒಡಕಲು ಬಿಂಬ ಮತ್ತು ಇತರ ನಾಟಕಗಳು:
“ಹೂವು, ಒಡಕಲು ಬಿಂಬ” ಗಿರೀಶ ಕಾರ್ನಾಡ ಅವರು ಗ್ರಂಥಮಾಲೆಗಾಗಿ ರಚಿಸಿದ ನಾಟಕಗಳ ಸಂಕಲನ. ಇದರಲ್ಲಿ ಹೂವು (ಭಾಷಣ ರೂಪಕ), ಒಡಕಲು ಬಿಂಬ (ನಾಟಕ), ಮಾನಿಷಾದ (ನಾಟಕ) ಮತ್ತು ಮಹೇಶ ಎಲಕುಂಚವಾರ ಅವರ ಎರಡು ಅನುವಾದಿತ ನಾಟಕಗಳು “ವಾಸಾಂಸಿ ಜೀರ್ಣಾನಿ” ಮತ್ತು “ಧರ್ಮ ಪುತ್ರ” ಸೇರಿವೆ.
- -10%
ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚೂರೀ….
0Original price was: ₹120.00.₹108.00Current price is: ₹108.00.ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚೂರೀ….
ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚುರೀ ಇವು ಎರಡು ನಾಟಕಗಳಾಗಿದ್ದು , ಇವೆರಡು ನಾಟಕಗಳಿಗೆ ಪ್ರೇರಣೆ ಫ್ರೆಂಚ್ ಪ್ರಹಸನಕಾರ ಮೊಲಿಯರನದ್ದು. ‘ಆಚಾರ್ಯ ಪ್ರಹಸನ’ವು ಮೋಲಿಯರನ ‘ಲೆ ತಾರ್ ತೂಫ್’ ನಾಟಕದಿಂದಲೂ. ‘ಏನ್ ಹುಚ್ಚೂರೀ….’ ನಾಟಕವು ‘ಬೂರ್ಜ್ವಾ ದಿ ಜಂಟಲ್ ಮನ್’ ನಾಟಕದಿನ್ದಲೂ ಪ್ರಭಾವಿತವಾಗಿವೆ. ಈ ಎರಡು ನಾಟಕಗಳನ್ನು ಅಭಿನಯಿಸುವುದು ಸುಲಭವಲ್ಲ. ನಾಟಕಕಾರ ಹಾಗೂ ನಿರ್ದೇಶಕರ ಮೇಲೆ ಕಲಾತ್ಮಕ ನಿರ್ಬಂಧ ಹೀರಾ ಬಲ್ಲ ಕೃತಿಗಳಿವು.
- -10%
ತೇರು….
0Original price was: ₹170.00.₹153.00Current price is: ₹153.00.ತೇರು ಕಾದಂಬರಿಯನ್ನು ಓದಲಾರಂಭಿಸಿದಾಗ ಒಂದನೇ ಭಾಗದಲ್ಲಿ ಪತ್ರಕರ್ತ ಪಾಟೀಲರಿಗೆ ಧರಮನಟ್ಟಿ ಸ್ವಾಂವಪ್ಪಜ್ಜ, ಧರಮನಟ್ಟಿಯ ದೇಸಗತೀ ಕಥೀ ಹೇಳಲಾರಂಭಿಸಿದ. ಅದರ ಜೊತಿಗೆ ನಾಳೆ ನಮ್ಮೂರಾಗ ವಿಠ್ಠಲ ದೇವರ ತೇರ ಇದೆ ನೀವು ಬರಲೇ ಬೇಕು ಎಂದು ಹಠ ಹಿಡಿದು ಕರದುಕೊಂಡು ಹೋದ. ಅಂದು ರಾತ್ರಿ ಅಲ್ಲಿ ಗೊಂದಲಿಗ್ಯಾರು ಕಥಿ ಹೇಳತಾರ ಕೇಳುಣ ನಡಿರಿ ಎಂದು ಪಾಟೀಲರನ್ನು ಕರೆದುಕೊಂಡು ಹೋದ. ವಿಠಲ ದೇವರ ತೇರಿನ ವರ್ಣನೆಯನ್ನ ಆರಂಭಿಸಿ ತೊಗಲು ಬೊಂಗೆ ಆಡಿಸೋ ದ್ಯಾಮಣ್ಣನ ಮಗನ ಮರಣದವರೆಗೂ ಗೊಂದಲಿಗ್ಯಾರ ಪದದ ಧಾಟಿಯಲ್ಲೇ ಸಂಪೂರ್ಣ ಕಥೆ ಹೇಳಿದ್ದು ಕಾದಂಬರಿಗೆ ಬಹು ವಿಶೇಷ ಮೆರಗನ್ನು ಕೊಟ್ಟಿದೆ.
ಕಾದಂಬರಿಯಲ್ಲಿ ತೇರು ತಯಾರಿಸಿದ ನಂತರ ಮೊದಲ ತೇರು ಏಳೆಯಲು ಜನರು ಸೇರಿದಾಗ ಒಂಚೂರ ನೆಲಬಿಟ್ಟು ಕದಲೋದಿಲ್ಲ. ಅದಕ್ಕೆ ಪುರೋಹಿತರನ್ನ ವಿಚಾರಿಸಲಾಗಿ ಅದಕ್ಕೆ ಕೆಳಜಾತಿಯ ಮನುಜನ ಬಲಿ ಬೇಕು ಎಂದು ಕೇಳುತ್ತಿದೆ ತೇರು ಎಂದ ಹೇಳುತ್ತಾನೆ ಪುರೋಹಿತ. ಊರಲ್ಲಿ ಸುದ್ಧಿ ಹರಡಿ ಬೆಳಗಾಗುದರೊಳಗ ಎಲ್ಲ ಕೀಳುಕುಲದ ಜನಾಂಗ ಊರು ಬಿಟ್ಟು ಹೊರಟೋಗಿದ್ದರು. ಒಬ್ಬನೇ ಒಬ್ಬನು ಗೊಂಬೀರಾಮರಾ ದ್ಯಾವಯ್ಯ ದೇವಾಲಯದ ಆವರಣದಲ್ಲಿ ಸಿಕ್ಕನು. ಡಂಣಾಯಕ ಹಾಗು ಅವನ ಹೆಂಡತಿ ಸೇರಿ ದ್ಯಾವಯ್ಯನಿಗೆ ೮ ಎಕರೆ ಜಮೀನು ನೀಡುವುದಾಗಿ ಆಸೆ ಚೆಲ್ಲಿ ಒಬ್ಬ ಮಗನನ್ನ ತೇರಿಗೆ ಬಲಿಕೊಡಲು ತಯಾರಿ ಮಾಡಿದರು. ದ್ಯಾವಯ್ಯನ ಹೆಂಡತಿ ಪಾರೋತೆವ್ವ ಗೋಳಾಡಿ ಅಳಲು ಪ್ರಾರಂಭಿಸುತ್ತಾಳೆ. ಗಂಡ ಅವಳನ್ನು ಬಡಿದು ಹೊಡೆದು ದೇವರಿಗೆ ಮಗನನ್ನ ಅರ್ಪಿಸೋಣ ಎಂದು ಹೇಳಿದನು. ಹಣದ ಆಸೆಗೋ ಏನೋ ಅಂದು ಮಡದಿಯ ಮಾತಿಗೆ ಬೆಲೆ ಕೊಡದೇ ಬಡಿದು ತೇರಿಗೆ ಮಗನನ್ನ ಅರ್ಪಿಸಿದರು. ಅಂದಿನಿಂದ ಇಂದಿನವರೆಗೂ ದ್ಯಾವಪ್ಪನ ಮನೆತನದವರೇ ಬಂದು ರಕ್ತತಿಲಕ ಅಂದ್ರೆ ಹಣೆಯನ್ನು ತೇರಿನ ಗಾಲಿಗೆ ಗುದ್ದಿ ರಕ್ತಾ ಬಂದ ನಂತರ ಆ ರಕ್ತವನ್ನು ದೇವರಿಗೆ ಹಚ್ಚಿದಾಗ ತೇರು ಮುಂದೆ ಬರ್ತಿತ್ತು ಎಂಬ ವಾಡಿಕೆ ಮುಂದುವರೆದಿತ್ತು.
- -10%
ಕೈಗೆ ಬಂದ ತುತ್ತು
0Original price was: ₹250.00.₹225.00Current price is: ₹225.00.ಕೈಗೆ ಬಂದ ತುತ್ತು
‘ಕೈಗೆ ಬಂದ ತುತ್ತು’ ಆತ್ಮಕಥನದಲ್ಲಿ ಗುರುಪ್ರಸಾದ ತಾವು ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ.
ಈ ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು. - -10%
ಸಾಹಿತ್ಯದ ವೈಜ್ಞಾನಿಕ ಮೀಮಾಂಸೆ
0Original price was: ₹600.00.₹540.00Current price is: ₹540.00.ಸಾಹಿತ್ಯದ ವೈಜ್ಞಾನಿಕ ಮೀಮಾಂಸೆ
ಕಾವ್ಯಮೀಮಾಂಸೆಯನ್ನು ಕುರಿತಂತೆ ಗಿರಿ ಅವರು ನಡೆಸುವ ವೈಜ್ಞಾನಿಕ ಶೋಧ, ಚಿಂತನೆ ಮಹತ್ವದ ಅಂಶಗಳನ್ನು ಹೊರ ಹಾಕುತ್ತದೆ. ಪ್ರಾಚೀನ ಭಾರತೀಯ ಮೀಮಾಂಸೆಯ ಸಾಧನೆಗಳನ್ನು ಮತ್ತು ಸಮಸ್ಯೆಗಳನ್ನು ಅಥವಾ ಕೊರತೆಗಳನ್ನು ಗಿರಿ ಅವರು ಶೋಧಿಸುತ್ತಾರೆ; ಸ್ಪಷ್ಟ ನಿಲುವಿನಲ್ಲಿ ಅವುಗಳನ್ನು ದಾಖಲಿಸುತ್ತಾರೆ.
- -10%
ಮೆಲುಕು
0Original price was: ₹200.00.₹180.00Current price is: ₹180.00.ಮೆಲುಕು
(ಲೇಖನಗಳು)ಈ ಪುಸ್ತಕವನ್ನು ಗಿರೀಶ ಕಾರ್ನಾಡ ಅವರು ಬರೆದಿದ್ದಾರೆ.
- -10%
ಕಣ್ಣಾ ಮುಚ್ಛೇ…. ಕಾಡೇ ಗೂಡೇ….
0Original price was: ₹250.00.₹225.00Current price is: ₹225.00.ಬಿ ಜಯಶ್ರೀ ಅವರಂತಹ ಶಕ್ತಿಯನ್ನು, ಸ್ವಾಭಿಮಾನಿಯನ್ನು, ಪ್ರತಿಭೆಯನ್ನು ಅಕ್ಷರಗಳಲ್ಲಿ ಬಂಧಿಸುವುದಾದರೂ ಹೇಗೆ? ನಾನು ಈ ಸವಾಲಿಗೆ ಮುಖಾಮುಖಿಯಾದಾಗಲೆಲ್ಲ ನನಗೆ ದೊಡ್ಡ ಬೆಂಬಲ ಮತ್ತು ಬೆನ್ನು ಚಪ್ಪರಿಸುವಂಥಾ ನಂಬಿಕೆಯ ಮಾತುಗಳು ಬಂದದ್ದು ಸ್ವತಃ ಜಯಶ್ರೀ ಅವರಿಂದ.
- -10%
ಶೋಕಚಕ್ರ
0Original price was: ₹60.00.₹54.00Current price is: ₹54.00.ಶೋಕಚಕ್ರ
ಮಹಾತ್ಮಾ ಗಾಂಧಿಯವರ ಚಳವಳಕ್ಕೆ ಪ್ರಾರಂಭವಾದದ್ದು ೧೯೨೦ರಲ್ಲಿ . ೧೯೨೪ರಲ್ಲಿ ೨೦ ನಿಮಿಷಗಳ ವರೆಗೆ ಅವರ ಸಂದರ್ಶವನ್ನು ಪಡೆದಿದ್ದೆ. ರಾಜಕೀಯಕ್ಕಿಂತ ಸಾಮಾಜಿಕ, ಅದಕ್ಕಿಂತ , ಅಂತರಂಗಿಕ ಸುಧಾರಣೆ ಅಗತ್ಯ ಎಂಬುದನ್ನು ಆಗ ನಾನು ಕಲಿತುಕೊಂಡ ಪಾಠ.
ಸ್ವಾತಂತ್ರ್ಯ ಪ್ರಾಪ್ತಿಯ ತರುವಾಯ ನಾನು ಬಹಳ ಆಶೆಯಿಂದ ಪರಿಸ್ಥಿತಿಯನ್ನು ನೋಡುತ್ತಲಿದ್ದೆ. ಯಾವುದೊ ಒಂದು ಕಾರಣಕ್ಕೆ ರಾಜಕೀಯ ಸ್ವಾತಂತ್ರ್ಯದ ಅವಸರವಿದ್ದು ಮಹಾತ್ಮಾಜಿಯವರು ಅದಕ್ಕೆ ಪ್ರಾಶಸ್ತ್ಯವನ್ನು ಕೊಟ್ಟಿದ್ದರು. ಈಗ ಆ ಜಂಜಾಟ ಮುಗಿಯುತ್ತಲ್ಲ? ಸಾವಿರಾರು ವರ್ಷಗಳಿಗೊಮ್ಮೆ ಅವತರಿಸುವ ಭಗವಂತನ ಅಂಶದಂತಿದ್ದ ಮಹಾತ್ಮಾಜಿಯವರಿಂದ ನಿಜವಾದ- ಅಂತರಂಗಿಕ-ಸುಧಾರಣೆ ಜನತೆಯಲ್ಲಿ ಮೂಡುವುದಲ್ಲ? ಹೀಗೆ ಉತ್ಸಾಹಗೊಳ್ಳುತ್ತಿರುವಾಗ ಜನವರಿ ೩೦, ೧೯೮೯ರ ದುರ್ಘಟನೆ ನಡೆದುಹೋಯಿತು. “ಜಗತ್ತಿನ ದೀಪ ನಂದಿತು.”
ಈ ಸಂದರ್ಭದ ಹಿನ್ನಲೆಯಲ್ಲಿ ದೇಶದ ಚುನಾವಣಾ, ಸ್ಥಾನಿಕ ಮುಂದಾಳುಗಳ ಸಾಂಸ್ಕೃತಿಕ ಮಟ್ಟ ಇದನ್ನೆಲ್ಲ ನೋಡಿ ಮೂಡಿದ ಭಾವನೆಗಳೇ ಈ ‘ಶೋಕಚಕ್ರ ‘ ನಾಟಕದಲ್ಲಿ ಮೂಡಿದೆ. ಇಲ್ಲಿಯ ಆಯಾ ಪಾತ್ರಗಳೇ ಪರಿಸ್ಥಿತಿಯನ್ನು ಚನ್ನಾಗಿ ಚಿತ್ರಿಸುವುವು.