• -40%

    ರಾಜಧರ್ಮ-ರಾಜನೀತಿ ಭಾಗ ೧

    0

    ರಾಜಧರ್ಮ, ರಾಜನೀತಿ ಭಾಗ ೧ 

    ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುವುದು ಕಷ್ಟದ ಕೆಲಸ ಎಂದು ನನ್ನ ಅನುಭವ. ಬೇರೆಯವರ ಅಭಿಪ್ರಾಯವು ಬೇರೆಯೇ ಇದ್ದರೆ ಅದಕ್ಕೆ ಅವರವರೇ ಹೊಣೆ. ಬರೆಯುವವನ “ವ್ಯವಸಾಯ” – ಅಂದರೆ ಓದಿನ ವ್ಯಾಪ್ತಿ, ಅದರ ಸಾಂದರ್ಭಿಕ ಅನ್ವಯಿಕೆ, ಸಂಗತಿಗಳನ್ನು, ಸಂದರ್ಭಗಳನ್ನು ನೋಡುವಲ್ಲಿ, ಅರಿಯುವಲ್ಲಿ, ವಿಶ್ಲೇಷಣೆ ಮಾಡುವಲ್ಲಿ ಇರಬೇಕಾದ ನಿರ್ದಿಷ್ಟ ಸಾಮುದಾಯಿಕ, ಸಾರ್ವತ್ರಿಕ ಹಿತ, ನಿಷ್ಠುರವಾದರೂ ಸತ್ಯವನ್ನು ಹೇಳುವ ಛಲ, ಎದೆಗಾರಿಕೆ, ಅದಕ್ಕೆ ಬೇಕಾದ ಸಮರ್ಥನೆಗಳನ್ನು ಓದಿನಿಂದಲೂ, ಅನುಭವದಿಂದಲೂ ನಿರೂಪಿಸುವ ಪರಿಶ್ರಮ – ಅಡಕವಾಗಿ, ಓದುಗರ ಎಲ್ಲ ವರ್ಗಗಳನ್ನೂ ಮನದಲ್ಲಿಟ್ಟು, ತಿಳಿಯುವಂತೆ ಎಚ್ಚರ ವಹಿಸಬೇಕಾದ ಬರೆಹದ ಬಿಗಿ, ತಿಳಿ, ಭಾರವಾಗದ ಶೈಲಿ, ಅಲ್ಲಲ್ಲಿ ನೆನಪುಗಳು, ವ್ಯಕ್ತಿ ಚಿತ್ರಣ, anecdotes , ರೋಚಕವಾದ ಸಂಗತಿಗಳು ಎಲ್ಲೋ ಚದುರಿದ್ದರೂ, ಸಣ್ಣವಾಗಿದ್ದರೂ, ಹಿಡಿಯುವ ಸೂಕ್ಷ್ಮತೆ, ವಾರಾವಾರ ಪತ್ರಿಕಾಲಯಕ್ಕೆ ಸಕಾಲಕ್ಕೆ ತಲುಪಿಸಬೇಕಾದ ಹೊಣೆ, ಎಚ್ಚರ – ಇಂಥವು ಸುಲಭಸಾಧ್ಯವಾಗಿ ವಶವಾಗುವ ಗುಣಗಳಲ್ಲ. ಎಲ್ಲರೂ ಹೀಗೆ ಬರೆಯತ್ತಾರೋ ಇಲ್ಲವೋ, ಎಂಬುದು ನಿಮಗೂ ಗೊತ್ತಿದೆ. ಬರೀ Journalistic  ಎಂಬ ರೀತಿಯ ಸುದ್ದಿ ವಿಶ್ಲೇಷಣೆಗೇ ಮೀಸಲಾದ ಅಂಕಣ ಬರೆಹಗಾರರ ರೀತಿ ಬೇರೆ. ಅಲ್ಲಿ ಸೂಕ್ಷ್ಮತೆ, ವಿಶ್ಲೇಷಣಾ ಕುಶಲತೆ, ಸಮಗ್ರ ಸಂಗತಿಗಳ ಪಕ್ಷಿ ವೀಕ್ಷಣ, ಸುದ್ದಿ ಸಾಮೀಪ್ಯ, ತಕ್ಕಮಟ್ಟಿನ ನಿಷ್ಪಕ್ಷಪಾತತೆ, ಅತಿರೇಕ, ಆಕ್ರೋಶ, ಇಲ್ಲದ ಶೈಲಿ, ಓದುಗನನ್ನು ಮೆಚ್ಚಿಸಹೊರಡದ ಸುದ್ದಿನಿಷ್ಠೆ, ವಸ್ತು ನಿಷ್ಠೆ – ಬರೀ “report ” ಆಗದಂತೆ ವಹಿಸಬೇಕಾದ ಎಚ್ಚರ, ಇವು ಒಂದು ಬಗೆ.

    Original price was: $4.20.Current price is: $2.52.
    Add to basket
  • -40%

    ಶ್ರೀ ಭಾಗವತ ಕಥಾ ಪ್ರಪಂಚ

    0

    ಶ್ರೀ ಭಾಗವತ ಕಥಾ ಪ್ರಪಂಚ

    ಶ್ರೀ ಭಾಗವತಧಾರಾತೀರ್ಥ ವಾಹಿನಿ

    ಈ “ಶ್ರೀ ಭಾಗವತ ಧಾರಾತೀರ್ಥವಾಹಿನೀ-ಶ್ರೀ ಭಾಗವತ ಕಥಾ ಪ್ರಪಂಚ” ಗ್ರಂಥದ ಪ್ರಕೃತ ಸಂಪುಟದ ಬಹುಭಾಗವನ್ನು ನಾನು ಬರೆದೇ ೧೬- ಅಥವಾ ೧೮ ವರ್ಷಗಳಾಗಿರಬೇಕು. ಮೊದಲ ಭಾಗಕ್ಕೆ ಸೇರ್ಪಡೆಯಾಗಬೇಕಿದ್ದ ಇನ್ನಷ್ಟನ್ನು ಇದೀಗ ಸೇರಿಸಿ ಒಂದು ರೂಪಕ್ಕೆ ತಂದು, ನನ್ನ ಮಿತ್ರ ಶ್ರೀ ಸುಬ್ರಹ್ಮಣ್ಯ ಅವರ ಪ್ರಕಾಶನದಿಂದ ಪ್ರಕಟಿಸಿ ನಿಮ್ಮ ಕೈ ಸೇರುವಂತೆ ಮಾಡಲಾಗಿದೆ. “ಈ ಗ್ರಂಥ ಏಕೆ ಇಷ್ಟು ತಡವಾಯಿತು? ಇದರಲ್ಲೇನಿದೆ? ಇದರ ಅವಶ್ಯಕತೆಯೇನು?” ಎಂಬ ಬಗೆಗೆ ನಾಲ್ಕು ಮಾತು ವಿವರಣೆ ಅವಶ್ಯವಾಗುತ್ತದೆ.
    “ಶ್ರೀಕೃಷ್ಣಾವತಾರ” (ಎರಡು ಭಾಗಗಳು) ಬರೆದಾಗಿತ್ತು. ಮೊದಲನೆಯದು ಭಾಗವತ ದಶಮಸ್ಕಂಧದ ಪೂರ್ವಾರ್ಧದ ಕಾದಂಬರೀಕರಣ, ಕಥಾರೂಪ ನಿವೇದನೆಯಾಗಿದ್ದು “ತರಂಗ” ವಾರಪತ್ರಿಕೆಯಲ್ಲಿ ಪ್ರಕಟವಾಗಲು ವಾರಾವಾರಾ ಕಂತಿನಲ್ಲಿ ಬರುವಂತೆ ಬರೆಯಲಾಗಿದ್ದು ಪ್ರಕಟವೂ ಆಯಿತು.

    Original price was: $4.20.Current price is: $2.52.
    Add to basket
  • -40%

    ಆಳ್ವಾರರು ಮತ್ತು ಹರಿದಾಸರು

    0

    ಆಳ್ವಾರರು ಮತ್ತು ಹರಿದಾಸರು

    ಹರಿದಾಸರು, ಆಳ್ವಾರುಗಳು, ಶರಣರು, ಉತ್ತರ ಭಾರತೀಯ ಭಕ್ತಿ ಸಾಹಿತ್ಯ ರಚಯಿತರಾದ ಸಂತರು, ಭಕ್ತರು – ಇವರೇ ನಮ್ಮ ಸಂಸ್ಕೃತಿಯನ್ನು ಆಪತ್ಕಾಲದಲ್ಲಿ ವಿದೇಶೀಪ್ರಭಾವ, ಮತಾಂತರ ಹಾವಳಿಯಿಂದ ರಕ್ಷಿಸಿದವರು. ಯೋಗಿಗಳು, ಜ್ಞಾನಿಗಳು. ಪ್ರಕೃತ ಗ್ರಂಥದಲ್ಲಿ ನಾನು ಆಳ್ವಾರರುಗಳ ಮತ್ತು ಹರಿದಾಸರ ಕೊಡುಗೆಗಳು, ಶೈಲಿ ವ್ಯತ್ಯಾಸಗಳು, ಪರಸ್ಪರ ಪ್ರಭಾವಸಾಧ್ಯತೆಗಳನ್ನು ಕುರಿತು ಹಲವು ದಶಕಗಳ ಹಿಂದೆ ಉಡುಪಿಯಲ್ಲಿ ನೀಡಿದ ಉಪನ್ಯಾಸಗಳ ಮರುಮುದ್ರಣವಿದು.

    ಎಲ್ಲ ವೇದಾಂತವೂ ಅದಕ್ಕೆ ಪೂರಕವಾದ ತರ್ಕ ವ್ಯಾಕರಣಾದಿ ಶಾಸ್ತ್ರಗಳೂ ಪರಿಪೂರ್ಣತೆ ಹೊಂದಿ, ಪರಿಸಮಾಪ್ತಿ, ಸಮಗ್ರ ಪ್ರತ್ಯಕ್ಷಾನುಭವದ ರೂಪದಲ್ಲಿ ಉಪಾಸಕನಿಗೆ ದೊರಕುವುದೇ “ಯೋಗ”ದಲ್ಲಿ. ಹಾಗೆಂದರೆ ಬರೀ “ಆಸನ”ಗಳಲ್ಲ, ದೇಹ ವ್ಯಾಯಾಮ ಅಲ್ಲ. ಅಷ್ಟಾಂಗ ಯೋಗವಿಜ್ಞಾನಕ್ಕೇ ಭಕ್ತಿ ಎಂದು ಬೇರೊಂದು ಹೆಸರು. ಪಾತಂಜಲಯೋಗಕ್ಕೂ ಪೂರ್ವದ್ದು ಅಧ್ಯಾತ್ಮ ವೈದಿಕ ಯೋಗ. “ಮನಸ್ಸನ್ನು ದೇವರಿಂದ ತುಂಬುವುದೇ ಯೋಗ”. (ಯುಜ್ ಸೇರಿಸುವುದು). ಮನಸ್ಸನ್ನು “ಖಾಲಿ” ಮಾಡುವುದಲ್ಲ!

    Original price was: $0.60.Current price is: $0.36.
    Add to basket
  • -40%

    ಭಾರತ, ಇಸ್ಲಾಂ ಮತ್ತು ಗಾಂಧಿ

    0

    ಭಾರತ, ಇಸ್ಲಾಂ ಮತ್ತು ಗಾಂಧಿ:
    ಶ್ರೀ ಅರವಿಂದರ ಭವಿಷ್ಯವಾಣಿ
    ಮತ್ತು ಇತರ ಲೇಖನಗಳು
    ಗಾಂಧಿಯವರ ಮೇಲೂ ಹೆಚ್ಚು ಬೆಳಕು ಚೆಲ್ಲುವ, ದಿಗ್ದರ್ಶಕವಾದ ಸೂಕ್ತ ಲೇಖನಗಳು ಎಂದು ಭಾವಿಸುತ್ತೇನೆ. ಈಗ ನಮ್ಮೆದುರು ಇರುವುದು ರಾಷ್ಟ್ರ ರಕ್ಷಣೆಯ ಮಹಾ ಹೊಣೆ. ಅದಕ್ಕೆ ವಿಘ್ನವಾಗಿರುವ ಎಲ್ಲ ದುಷ್ಟ ವಿಚಾರಗಳನ್ನೂ, ಅಂಥ ಪರಂಪರೆಗಳನ್ನೂ, ಅವುಗಳನ್ನು ಹುಟ್ಟು ಹಾಕಿದವರನ್ನೂ ನಿರ್ದಾಕ್ಷಿಣ್ಯವಾಗಿ ಬಯಲು ಮಾಡಿ, ಅವುಗಳನ್ನು ಮೆಟ್ಟಿಯೇ ನಾವು ಮುಂದೆ ನಡೆದ ಹೊರತು ನಮಗೆ ಭವಿಷ್ಯವಿಲ್ಲ. ಕಣ್ಣು ಮುಚ್ಚಿ ಒಪ್ಪುವ, ಯಾರನ್ನೂ ಪೂಜಿಸುವ ಅಂಧಶ್ರದ್ಧೆ ಭಾರತೀಯ ಪರಂಪರೆಗೆ ದೂರವಾದುದು.

    Original price was: $1.80.Current price is: $1.08.
    Add to basket
  • -40%

    ತಲೆಬುರುಡೆ ಬಿಡಿಸಿದ ಕೊಲೆ ರಹಸ್ಯ

    0

    ತಲೆ ಬುರುಡೆ
    ಬಿಡಿಸಿದ ಕೊಲೆ ರಹಸ್ಯ
    ಮೂಲ : ಶ್ರೀ ಕೆ. ರಾಮಯ್ಯ ರೈ
    ಅನುವಾದ: ಕೆದಂಬಾಡಿ ಜತ್ತಪ್ಪ ರೈ
    ಸಮಾಜದ ಈ ಸ್ವಾಸ್ಥ್ಯ ಕಾಪಾಡಲು ನಾವೇ ಪೊಲೀಸ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪೊಲೀಸರು ನಾಗರಿಕರ ಸ್ನೇಹಿತರಾಗಿದ್ದರೆ ಅದರಿಂದ ಎಲ್ಲರಿಗೂ ಹಿತ. ಒಳ್ಳೆಯ ಪೊಲೀಸ್ ಅಧಿಕಾರಿಗಳಿಗೆ ಯಾವತ್ತೂ ಜನರ ನೈತಿಕ ಬೆಂಬಲ ಸಿಕ್ಕಿಯೇ ಸಿಗುತ್ತದೆ. ಪೊಲೀಸರೇ ನಾಗರಿಕರ ಸಹಕಾರ ಪಡೆಯದೆ ದೂರ ಸರಿದರೆ ಈ ಮಾತು ವಿರೋಧಾಭಾಸದ್ದು ಅನಿಸುತ್ತದೆ.
    ಆದರೆ ನಮ್ಮ ನಡುವೆ ಶ್ರೀ ಕೆ. ರಾಮಯ್ಯ ರೈ ಅವರಂಥ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳೂ ಇದ್ದರು. ಅವರ ಅನುಭವ ನೆನಪುಗಳೇ ಇಂದಿನವರಿಗೆ ಆದರ್ಶವಾಗಲಿ. ಅವರ ಸ್ವಾನುಭವದ ಸತ್ಯಕಥೆ ‘ತಲೆಬುರುಡೆ’ ಕಾದಂಬರಿ ರೂಪದಲ್ಲಿ ಸ್ವಾರಸ್ಯಕರವಾಗಿ ಹರಿದು ಬಂತು.

    Original price was: $2.10.Current price is: $1.26.
    Add to basket
  • -40%

    ಬೆಟ್ಟದ ತಪ್ಪಲಿನಿಂದ ಕಡಲ ತಡಿಗೆ

    0

    ಬೆಟ್ಟದ ತಪ್ಪಲಿನಿಂದ ಕಡಲ ತಡಿಗೆ
    ಬೆಟ್ಟದ ತಪ್ಪಲಿನಿಂದ ಕಡಲ ತಡಿಗೆ ಪುಸ್ತಕವು ಬೆಟ್ಟದ ತಪ್ಪಲ ಮಾರಿಯಾದ ಹುಲಿಯನ್ನು ಮನೆಗೆ ತಂದು, ಅದು ಪಾಪ ರೂಪದ ಬೇತಾಳನಾಗಿ ಬೆಂಬತ್ತಿ ಹೆಗಲೇರಿ ಅನುದಿನವೂ ಪೀಡಿಸುತ್ತಿರಲಾಗಿ, ಅದರ ಜೀವನವನ್ನು ದುರಂತದಲ್ಲಿ ಅಂತ್ಯಗೊಳಿಸಿದ ಘಟನೆಯಾಗಿದೆ.

    Original price was: $0.96.Current price is: $0.58.
    Add to basket
  • -40%

    ಈಡೊಂದು ಹುಲಿಯೆರಡು 

    0

    ಈಡೊಂದು ಹುಲಿಯೆರಡು
    ‘ಬೇಟೆಯ ನೆನಪುಗಳು ‘ ಕನ್ನಡ ಜನತೆಯಲ್ಲಿ ಮೂಡಿಸಿದ ಪರಿಣಾಮ ರಮಣೀಯತೆಗೆ ಸರಿಮಿಗಿಲೆನಿಸಿ ‘ ಈಡೊಂದು ಹುಲಿಯೆರಡು’ ಎಂಬೀ ಕೃತಿಯು ಮತ್ತಷ್ಟು ಬಣ್ಣ ಬೆಡಗು ಬೆರಗುಗಳನ್ನು ಹೊತ್ತು ವಿಜೃಂಭಿಸುವುದರಲ್ಲಿ ಸಂಶಯವಿಲ್ಲ.  ಇಲ್ಲಿರುವುದು ಬರಿಯ ಬೇಟೆಯ ವ್ಯಸನದ ಕ್ರೌರ್ಯದ ರಕ್ತರಂಜಿತ ಕಥನವಲ್ಲ; ನಾಲ್ಕೈದು ದಶಕಗಳ ಹಿಂದಿನ ತುಳುವ ಮಲೆನಾಡಿನ ಬದುಕಿನ ಜೀವಂತ ಚಿತ್ರಣ; ಒಂದು ಸೀಮೆಯ ಜನದ ನಡವಳಿಕೆಯನ್ನು ನಿಚ್ಚಳವಾಗಿ ಬಣ್ಣಿಸಿದ ಕುಂಚದ ಕುಶಲತೆ.

    Original price was: $1.80.Current price is: $1.08.
    Add to basket
  • -40%

    ಬೇಟೆಯ ನೆನಪುಗಳು

    0

    ಬೇಟೆಯ ನೆನಪುಗಳು
    ಪ್ರವಾಸ ಕಥನ ಸಾಹಿತ್ಯದ ಒಂದು ಪ್ರಕಾರ; ಅದರಲ್ಲಿ ಕತೆಗಾರಿಕೆಯ ಅಂಶ ಅಡಕವಾಗಿರುವುದರಿಂದ ಆ ಪ್ರಬಂಧಪ್ರಕಾರ ಹೆಚ್ಚಿನ ಮೆಚ್ಚುಗೆ ಪಡೆದಿದೆ. `ಬೇಟೆಯ ನೆನಪುಗಳು’ ಎಂಬೀ ತೆರನ ಬರವಣಿಗೆ ಅದೇ ಹಾದಿಯಲ್ಲಿ ಸಾಗಿದರೂ, ಅದಕ್ಕಿಂತಲೂ ಆಕರ್ಷಕವಾಗಿ ಮೂಡಿಬಂದ ಒಂದು ಮಹತ್ತರ ಸಾಹಿತ್ಯ ಪ್ರಕಾರವೆನ್ನಬೇಕು. ಇದರಲ್ಲಿನ ವರ್ಣನೆ ಕಾದಂಬರಿಗಳ ವರ್ಣನೆಯ ಮಟ್ಟವನ್ನು ಮುಟ್ಟಬಲ್ಲುದು; ಅನೇಕ ಕುತೂಹಲಕಾರೀ ಘಟನೆಗಳು ಅಲ್ಲಲ್ಲಿ ಮೂಡಿ ಬಂದಿರುವುದರಿಂದ ಪತ್ತೇದಾರಿ ಕತೆಗಳ ಆಸಕ್ತಿ ಕೆರಳಿಸುವ ಅಂಶಗಳೂ ಇಲ್ಲಿ ವಿಪುಲವಾಗಿ ತುಂಬಿರುತ್ತವೆ.

    Original price was: $1.80.Current price is: $1.08.
    Add to basket
  • -40%

    ಬೇಟೆಯ ಉರುಳು

    0

    ಬೇಟೆಯ ಉರುಳು
    ತುಳುನಾಡ ಮಲೆನಾಡ ಮಣ್ಣಿನ – ಕನ್ನಡದ ಕೊಡುಗೆ. ಈ ಮಾತಿಗೆ ಪೂರಕವಾಗಿ ಭಾವೀ ಜನಾಂಗಕ್ಕಾಗಿ `ಬೇಟೆಯ ಉರುಳು’ – ಎಂಬ ಈ ಕೃತಿಯನ್ನು ರಚಿಸಿದ್ದಾರೆ. ಬೇಟೆಯ ಕುರಿತಾದ ಇವರ ಅನುಭವ ಬತ್ತದ ತೊರೆಯಾಗಿ ಹರಿಯುತ್ತದೆ.
    ಇಲ್ಲಿ ಚಿಕ್ಕ ಪುಟ್ಟ ಬೇಟೆಗಳಲ್ಲಿರುವ ಜಾಣ್ಮೆ, ವಿಶಿಷ್ಟತೆಗಳ ಸಜೀವ ವಿವರಣೆಗಳಿವೆ. ಬೇಟೆಯ ಹವ್ಯಾಸ ಕಾರಣಾಂತರಗಳಿಂದ ದೂರವಾಗುತ್ತಿರುವ ಈ ಕಾಲದಲ್ಲಿ ಈ ಸಂಬಂಧವಾದ ಸಾಕ್ಷ್ಯಚಿತ್ರದ ದಾಖಲೆಯು ಇದಾಗಿದೆ. ಬಾಯಿಮಾತಿನ ಅನುಭವವು ಬರೆಹರೂಪವಾಗಿ ಚಿತ್ರವತ್ತಾಗಿ ಇಲ್ಲಿ ಉಳಿಯುತ್ತದೆ.
    ಭಾವೀಜನಾಂಗಕ್ಕಾಗಿ ಬೇಟೆಯ ಉರುಳು ಎಂಬ ಈ ಕೃತಿಯು ಶ್ರೀ ಜತ್ತಪ್ಪ ರೈಗಳ ಈ ಹಿಂದಿನ ಎರಡು ಕೃತಿಗಳನ್ನೂ ಇನ್ನೊಂದು ಮುಖವಾಗಿ ದಾಟಿಹೋಗಿದೆ ಎನ್ನಬೇಕು. ಪುರಾಣ ಚರಿತ್ರೆಗಳ ಕಾಲದಲ್ಲಿ ದೊರೆಯುವ ಬೇಟೆಯ ಸಂದರ್ಭಗಳ ಸಂಶೋಧಕ ಮೌಲ್ಯವನ್ನು ಈ ಕೃತಿಯು ಎತ್ತಿ ತೋರಿಸುತ್ತದೆ. ಇದು ಇದರ ಹೆಚ್ಚಳ. ಮಕ್ಕಳಿಗಾಗಿ ಕಥೆ ಹೇಳುವಾಗ ಕೊಂಡಿ ಕಳಚಿಕೊಳ್ಳದಂತೆ ಕುತೂಹಲ ಕೊನರಿಡುವಂತೆ ಮಾಡುವ ತನ್ನದೇ ಆದ ಕಥಾನಕದ ತಂತ್ರವಿಲ್ಲಿ ಎದ್ದು ತೋರುತ್ತಿದೆ. ಕಥೆಗಳನ್ನು ಹೇಳುವಾಗ ವಿವರಣೆಗಾಗಿ ತಡಕಾಡುವುದಿಲ್ಲ. ಅವೆಲ್ಲ ತಾವಾಗಿಯೇ ಒಂದರ ಹಿಂದೊಂದು ಹರಿದುಬಂದಿವೆ.

    Original price was: $1.80.Current price is: $1.08.
    Add to basket