-
-40%
ಕುವೆಂಪು : ಯುಗದ ಕವಿ
0ಕುವೆಂಪು ಅವರ ವ್ಯಕ್ತಿತ್ವದ ಮೂಲನೆಲೆಯಾಗಿ ಆಧ್ಯಾತ್ಮಿಕತೆ, ಅವರ ಬರವಣಿಗೆಯು ಸ್ಥಳೀಯ ಮತ್ತು ವೈಶ್ವಿಕಗಳನ್ನು ಹೆಣೆಯುವ ಬಗೆ, ಅವರು ಲೌಕಿಕ ಮತ್ತು ಆಗಮಿಕಗಳ ನಡುವೆ ಸಾಧಿಸಿರುವ ಸಹಯೋಗದ ಸ್ವರೂಪ, ಅವರ ನಾಟಕಗಳ ಸಮಕಾಲೀನತೆ ಮತ್ತು ಸಾಮಾಜಿಕತೆ, ಕಾದಂಬರಿಗಳ ದಾರ್ಶನಿಕ ನೆಲೆಗಟ್ಟು ಮುಂತಾದ ಸಂಗತಿಗಳು ಇಲ್ಲಿ ಹೊಸ ಆಯಾಮಗಳನ್ನು ಪಡೆದುಕೊಂಡಿವೆ.
-
-39%
ಬೆಂದ ಕಾಳು ಆನ್ ಟೋಸ್ಟ್
0ಬೆಂದ ಕಾಳು ಆನ್ ಟೋಸ್ಟ್
ಒಂದು ಆಖ್ಯಾಯಿಕೆಯ ಪ್ರಕಾರ ಅರಸ ವೀರ ಬಲ್ಲಾಳ ಬೇಟೆಗೆಂದು ಹೊರಟವನು ಕಾಡಿನಲ್ಲಿ ದಾರಿ ತಪ್ಪಿ, ರಾತ್ರಿಯಿಡೀ ಸುತ್ತಾಡಿ ಹಸಿದು ಬಳಲಿ ಬಸವಳಿದಾಗ, ಒಬ್ಬ ಮುದುಕಿ ಅವನಿಗೆ ಬೆಂದ ಕಾಳುಗಳನ್ನು ನೀಡಿ ಅವನ ಪ್ರಾಣ ಉಳಿಸಿದಳು. ಆ ಉಪಕಾರವನ್ನು ಸ್ಮರಿಸಿ ಅರಸ ಆ ಸ್ಥಾನದಲ್ಲಿ ‘ಬೆಂದಕಾಳೂರು’ ಎಂಬ ಊರನ್ನು ಸ್ಥಾಪಿಸಿದ. ಅದೇ ಮುಂದೆ ‘ಬೆಂಗಳೂರು’ ಆಯಿತು.
-
-40%
ಮದುವೆಯ ಆಲ್ಬಮ್
0ಮದುವೆಯ ಆಲ್ಬಮ್
– ನಾಟಕ –
ಮದುವೆಯ ಅಲ್ಬಮ್ ಸಮಕಾಲೀನ ಜೀವನದ ಬಗ್ಗೆ ಗಿರೀಶ ಕಾರ್ನಾಡ ಅವರು ಬರೆದ ನಾಟಕ. ಇದರಲ್ಲಿರುವುದು ಸಮಕಾಲೀನ ಸಂವೆದನೆಯೇ ಹೊರತು ವಿಷಯವಲ್ಲ ಎಂದು ಗಿರೀಶ ಕಾರ್ನಾಡರ ಅಭಿಪ್ರಾಯ.
‘ಮದುವೆಯ ಆಲ್ಬಮ್’ ನಾಟಕದ ಮೊದಲನೆಯ ಪ್ರಯೋಗವನ್ನು Prime Time Theatre Company ಅವರು ಇಂಗ್ಲಿಷ್ ನಲ್ಲಿ Wedding Album ಎಂಬ ಹೆಸರಿನಲ್ಲಿ ಮುಂಬಯಿಯ National Centre for the Performing Arts ಅವರ ಟಾಟಾ ನಾಟ್ಯಗೃಹದಲ್ಲಿ ಶನಿವಾರ ೧೦ಮೇ ೨೦೦೮ರಂದು ಸಾದರಪಡಿಸಿದರು. -
-40%
ಜನನಾಯಕ -ಡಿ. ಕೆ. ನಾಯ್ಕರ್
0ಜನನಾಯಕ –ಡಿ. ಕೆ. ನಾಯ್ಕರ್
ರಾಜ್ಯ ರಾಜಕಾರಣದಲ್ಲಿ ಅಷ್ಟೇ ಅಲ್ಲ, ರಾಷ್ಟ್ರ ರಾಜಕಾರಣದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಶ್ರೀ ನಾಯ್ಕರ್ ವಿಶಿಷ್ಟ ವ್ಯಕ್ತಿತ್ವದ ರಾಜಕಾರಣಿ. ಇಂಥ ಅಪರೂಪದ ರಾಜಕಾರಣಿ ಕುರಿತು ಪುಸ್ತಕ ಬರೆಯುವ ಅವಕಾಶ ಸಿಕ್ಕಿದ್ದು ನನಗೆ ಸಹಜವಾಗಿಯೇ ಸಂತೋಷ ಉಂಟು ಮಾಡಿದೆ.
ಶ್ರೀ ಡಿ. ಕೆ. ನಾಯ್ಕರ್ ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹತ್ತು ಹಲವು ಹುದ್ದೆ, ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಆದರೆ ಅವರಿಗೆ ಮುಖ್ಯಮಂತ್ರಿಯ ಗದ್ದುಗೆ ದೂರವೇ ಉಳಿದದ್ದು ಈಗ ಇತಿಹಾಸ. ಒಂದು ಬಡ, ಹಿಂದುಳಿದ ಕುಟುಂಬದ ಹಿನ್ನೆಲೆಯಿಂದ ಬಂದು ರಾಜಕಾರಣದಲ್ಲಿ ನೆಲೆ ಕಂಡುಕೊಂಡು ರಾಜ್ಯದ ಸಮಸ್ತ ಜನರ ಶ್ರೇಯೋಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿದ ಶ್ರೀ ಡಿ. ಕೆ. ನಾಯ್ಕರ್ ಈಗಲೂ ಜನಮಾನಸದಲ್ಲಿ ನೆಲೆ ನಿಂತಿದ್ದಾರೆ. -
-40%
ಆಗೊಮ್ಮೆ ಈಗೊಮ್ಮೆ
0ಆಗೊಮ್ಮೆ ಈಗೊಮ್ಮೆ
(ಗದ್ಯ ಲೇಖನಗಳ ಸಂಗ್ರಹ)
ಇದೊಂದು ಭಾಷಣಗಳು, ಲೇಖನಗಳು ಮತ್ತು ವ್ಯಕ್ತಿ ಚಿತ್ರಗಳ ಸಂಕಲನ. ಇದರಲ್ಲಿ ಗಿರೀಶ ಕಾರ್ನಾಡ ಅವರು ಕಳೆದ ಐದು ದಶಕಗಳಲ್ಲಿ ಬೇರೆ ಬೇರೆ ವೇದಿಕೆಗಳಲ್ಲಿ ಮಾಡಿದ 11 ಭಾಷಣಗಳು, ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳು ಮತ್ತು 6 ವ್ಯಕ್ತಿಚಿತ್ರಗಳು ಸೇರಿವೆ.
-
-40%
ಅದ್ದ್ಯಾ
0ಅದ್ದ್ಯಾ
ಅದ್ದ್ಯಾ ಎಂಬ ನಾಮನಿರ್ದೇಶನಗಳಿಲ್ಲದ ವ್ಯಕ್ತಿಯು ತನ್ನದಲ್ಲದ ಬೇರೆಯವರ ಮನೆಯಲ್ಲಿ ಬದುಕಿ ಆ ಮನೆಯ ಸುಃಖ ದುಃಖಗಳಲ್ಲಿ ತಾನೂ ಭಾಗಿಯಾಗಿ ತಾನು ಜೀವನದಲ್ಲಿ ಕಲಿತ ಪಾಠಗಳನ್ನು ಆ ಮನೆಯ ಮಕ್ಕಳಿಗೆ ಕಲಿಸಿ ಅವರ ಜೀವನವನ್ನು ರೂಪಿಸಿದ ಚಿತ್ರ. ತಾನು ಸಮರ್ಪಿಸಿಕೊಂಡ ಮನೆಗೆ ತನ್ನನ್ನು ಸೀಮಿತಗೊಳಿಸಿಕೊಂಡು ಮನೆಯ ಸಂಸ್ಕೃತಿಗೆ ತಾನೂ ಭಾಗೀದಾರಳಾಗಿ ಅದಕ್ಕೆ ತನ್ನ ಕೊಡುಗೆಯನ್ನು ಇತ್ತವಳು ಈ ಅದ್ದ್ಯಾ. ಅದ್ದ್ಯಾ ತನ್ನ ಮೇರೆಯಲ್ಲಿನ ಸಮಾಜದ ಭಾಷೆ ನೀತಿ ನಿಲುವುಗಳನ್ನು ನಿರ್ದೇಶಿಸುವ ಜೀವ. ಆದ್ದರಿಂದ ಇದು ಒಮ್ಮೆ ನಾವು ಕಳಕೊಂಡ ತಿರುಗಿ ಮರಳಿ ಬಾರದ ಸಂಸ್ಕೃತಿಯ ಚಿತ್ರವೆಂದರೂ ಸರಿ. -
-40%
ಹಿಡಿಯದ ಹಾದಿ
0ಹಿಡಿಯದ ಹಾದಿ
(ಲಲಿತ ಪ್ರಬಂಧಗಳು)
ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು, ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ. -
-40%
ನೆನಪಿನಂಗಳದಲ್ಲಿ ಮುಸ್ಸಂಜೆ ಹೊತ್ತು
0ಸಮೃದ್ಧ ಅನುಭವ ಸುತ್ತಲಿನ ಜಗತ್ತಿನಲ್ಲಿ ಲವಲವಿಕೆಯ ಆಸಕ್ತಿಯಿರುವ ಮನುಷ್ಯ ನಿರೂಪಿಸಿದ ಪುಸ್ತಕಗಳಲ್ಲಿ ‘ನೆನಪಿನಂಗಳದಲ್ಲಿ ಮುಸ್ಸಂಜೆ ಹೊತ್ತು’ ಒಂದು. ಈ ಪುಸ್ತಕದ ಬರಹದಲ್ಲಿ ನಯ ನಾಜೂಕು, ಕಲೆ ಇಲ್ಲ. ನೇರವಾಗಿ ನಿರೂಪಣೆ. ಅನುಭವದಿಂದ ಎದ್ದು ಬಂದ ಚಿಂತನೆ. ಕಾರಂತರ ಅಪೂರ್ವ ಪ್ರಾಮಾಣಿಕತೆಯ ಶ್ರದ್ಧಾವಂತ ಜೀವನದ ಪರಿಚಯವಾಗುತ್ತದೆ.
ಅಪೂರ್ವಜೀವನದ ನೆನಪುಗಳನ್ನು ನಮಗೆ ಒದಗಿಸುವ ಪುಸ್ತಕ. ‘ಸಮಾಜದ ಋುಣ ಹೇಗೆ ತೀರಿಸಿಯೇನು?’ ಎಂದು ಬಹುಶಃ ಕೋ.ಲ.ಕಾರಂತರು ಹೇಳಿಕೊಂಡರೆ ಅದು ಅವರ ಹಿರಿತನವನ್ನು ತೋರಿಸುತ್ತದೆ.
ವೈದೇಹಿಯವರ ಸುಂದರ ನಿರೂಪಣೆ ಇದಾಗಿದೆ.
-
-40%
ಮನಸುಖರಾಯನ ಮನಸು
0ಮನಸುಖರಾಯನ ಮನಸು :
(ಕತೆ – ಹರಟೆ)
ಇದರಲ್ಲಿರುವ ಆರು ಲೇಖನಗಳಲ್ಲಿ ‘‘ಬಾಶಿಂಗ ಬಲ’’ ‘‘ತ್ರಯಸ್ಥ’’ ಹಾಗೂ ‘‘ಗಧೇ ಪಂಚವೀಶಿ’’ ಇವು ಮೂರು ಕಥಾ ರೂಪಿ ಹರಟೆಗಳು. ‘‘ಗಾಯಕವಾಡ ದಾದಾ’’ ಹರಟೆ ರೂಪಿ ವ್ಯಕ್ತಿ ಚಿತ್ರಣ; ‘‘ಶ್ರದ್ಧಾ’’ ಒಂದು ಬಾಲ್ಯಕಾಲದ ಚಿತ್ರಣ. ‘‘ಪುಸ್ತಕದ ಹುಳ’’ ಒಂದು ಶುದ್ಧ ತಲೆಹರಟೆ ರೂಪಿ ಹರಟೆ……………. -
-40%
ನಾ ಬದುಕಲಿಕ್ಕೆ ಒಲ್ಲೆಪಾ
0ನಾ ಬದುಕಲಿಕ್ಕೆ ಒಲ್ಲೆಪಾ
ಇದು ದ್ವಿಪಾತ್ರ ನಾಟಕಗಳ ಸಂಕಲನ. ದ್ವಿಪಾತ್ರ ನಾಟಕಗಳಿಗೆ ಸಂಭಾಷಣೆಯೇ ಜೀವಾಳ . ಸಂಭಾಷಣೆ ಮೂಲಕವೇ ಕುತೂಹಲವನ್ನು ಹುಟ್ಟಿಸುವ ತಂತ್ರಗಾರಿಕೆಯೇ ನಾಟಕದ ಮೂಲ ವಸ್ತು. ಯಾವುದೇ ಒಂದು ಸಮಸ್ಯೆಯನ್ನು ಎದುರಿಗಿಟ್ಟುಕೊಂಡು ಅದರ ಪರ ಮತ್ತು ವಿರೋಧದ ವಾಗ್ವಾದದ ಮೂಲಕವೇ ನಾಟಕವನ್ನು ರಚಿಸುವ ಜಾಣಕಲಾತ್ಮಕಯೇ ನಾಟಕಕಾರಣನ ಹಿರಿಮೆ. ಈ ನಿಟ್ಟಿನಲ್ಲಿ ಲೋಹಿತ ನಾಯ್ಕರ್ ಯಶಸ್ವಿಯಾಗಿದ್ದಾರೆ.
ಈ ನಾಟಕಗಳು ಹವ್ಯಾಸಿ ರಂಗಭೂಮಿಗೆ ಸೂಕ್ತವಾಗಿವೆ.