- -10%
ಬಾರೋ ಸಾಧನಕೇರಿಗೆ ಮತ್ತು ನಿಷ್ಕ್ರಿಯ ಘಾತಕಿ
0Original price was: ₹60.00.₹54.00Current price is: ₹54.00.ಬಾರೋ ಸಾಧನಕೇರಿಗೆ –
‘ಬಾರೋ ಸಾಧನಕೇರಿಗೆ… ಮತ್ತು ‘ನಿಷ್ಕ್ರಿಯ ಘಾತಕಿ’ ಎಂಬ ಬಾನುಲಿ ನಾಟಕಗಳನ್ನು ವಿಶೇಷವಾಗಿ ಆಕಾಶವಾಣಿಗೆಂದು ಬರೆದು ತೆಗೆದದ್ದು. ‘ನಿಷ್ಕ್ರಿಯ ಘಾತಕಿ’ ೨೦೧೦ರಲ್ಲಿ ಧಾರವಾಡ ಆಕಾಶವಾಣಿಯಿಂದ ಪ್ರಸಾರಗೊಂಡು ರಾಜ್ಯಮಟ್ಟದ ಆಕಾಶವಾಣಿ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ, ಕೇಂದ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿತ್ತು.
ಸಧ್ಯದ ವಾತಾವರಣದಲ್ಲಿ ಎಲ್ಲರ ಮುಖ ಐ. ಟಿ. ಕ್ಷೇತ್ರದತ್ತ ಹಾಗೂ ಪಶ್ಚಿಮದ ದೇಶಗಳತ್ತ ಮುಖ ಮಾಡಿರುವಾಗ ದೇಶೀಯ ಆಕರ್ಷಣೆ ತನ್ನ ಕಳೆಯನ್ನು ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಹೇಗೆ ಮತ್ತೆ ಮಾತೃಭೂಮಿ ತನ್ನ ನಿರಂತರವಾದ ಸೂಜಿಗಲ್ಲಿನ ಆಕರ್ಷಣೆಯಿಂದ ಪರದೇಶಿಗಳಾದವರನ್ನು ತನ್ನ ಹತ್ತಿರ ಎಳೆದುಕೊಳ್ಳುತ್ತದೆ ಎಂಬ ವಸ್ತುವನ್ನಿಟ್ಟುಕೊಂಡು ಬರೆದ ನಾಟಕ ‘ಬಾರೋ ಸಾಧನಕೇರಿಗೆ । ಮರಳಿ ನಿನ್ನೀ ಊರಿಗೆ, ಬೇಂದ್ರೆಯವರ ಕವನದ ಸಾಲುಗಳ ಶೀರ್ಷಿಕೆಯಾಗಿಸಿಕೊಂಡು ಹೆಣೆದ ಪ್ರಾರಂಭದ ವಾಕ್ಯವನ್ನು ನಾಟಕ ಅರ್ಥಪೂರ್ಣವಾಗಿದೆ.
ಹಾಗೆಯೇ ‘ನಿಷ್ಕ್ರಿಯ ಘಾತಕಿ’ ಎಂಬ ನಾಟಕ ಜನಸಾಮಾನ್ಯರ ಅಲಿಪ್ತತೆ ಹೇಗೆ ಜೀವನದ ಸ್ವಾಸ್ಥ್ಯವನ್ನು ಹಾಳು ಮಾಡುವದಕ್ಕೆ ಕಾರಣವಾಗುತ್ತದೆ ಎಂಬುದನ್ನು ಮನನೀಯವಾಗಿ ನಿರೂಪಿಸುತ್ತದೆ.