-
-40%
ಬೆಂಕಿಬಿದ್ದ ಬಯಲು ಮತ್ತು ಪೆದ್ರೊ ಪರಾಮೊ
0ಬೆಂಕಿಬಿದ್ದ ಬಯಲು ಮತ್ತು ಪೆದ್ರೊ ಪರಾಮೊ
ಬೆಂಕಿಬಿದ್ದ ಬಯಲು ಮತ್ತು ಪೆದ್ರೊ ಪರಾಮೊ. ಇದು ಹ್ವಾನ್ ರುಲ್ಫೋ ಸಮಗ್ರ ಸಾಹಿತ್ಯದ ಕನ್ನಡಾನುವಾದ.
-
-52%
ಧಾತು
0ಮೊಗಸಾಲೆಯವರ ಹೊಸ ಕಾದಂಬರಿ ‘ಧಾತು’ ಕಥನ ಕ್ರಮದಲ್ಲಿ ಪಲ್ಲಟವೊಂದನ್ನು ಇದು ಸೂಚಿಸುತ್ತದೆ. ಎಂದಿನಿಂದಲೂ ಎಲ್ಲ ಕಲಾಪ್ರಕಾರಗಳನ್ನೂ ನಿರಂತರವಾಗಿ ಕಾಡುತ್ತಿರುವ ಗಂಡು ಹೆಣ್ಣಿನ ಸಂಬಂಧವನ್ನು ಇದು ಧಾತುವಾಗಿ ಹೊಂದಿದೆ. ಆಧುನಿಕತೆಯೇ ಮೂಲವಾಗಿ ಬದಲಾಗುತ್ತಿರುವ ಬದುಕಿನ ವಿನ್ಯಾಸವನ್ನು ಇದು ಶೋಧಿಸಲೆಳಸುತ್ತದೆ.
-
-40%
ಒಂದು ಆನೆಯ ಸುತ್ತ
0ಒಂದು ಆನೆಯ ಸುತ್ತ
(ವಸ್ತುಸ್ಥಿತಿಯನ್ನು ಆಧರಿಸಿದ ಕಾಲ್ಪನಿಕ ಕಾದಂಬರಿ)
ವನ್ಯಜೀವಿಗಳ ಬಗ್ಗೆ ಮಾತಾಡುತ್ತೇವೆ. ಅವುಗಳ ಅಳಿವಿನ ಬಗ್ಗೆ ಕಾಳಜಿ ವ್ಯಕ್ತಪಡಿಸುತ್ತೇವೆ. ಆದರೆ ಬರಿಯ ಮಾತು, ಕಾಳಜಿಗಳಿಂದ ಅವು ಉಳಿಯಲಾರವು. ಅವುಗಳ ಅಳಿವಿಗೆ ಕಾರಣವಾಗುವ ಅಂಶಗಳ ಬಗ್ಗೆ ನಮ್ಮ ಗಮನ ಹರಿಯಬೇಕು. ಆನೆಗಳಂತಹಾ ದೈತ್ಯಜೀವಿಗಳು ಊರೊಳಗೆ ನುಗ್ಗಿ ಆಸ್ತಿ, ಮನೆ, ಬೆಳೆ, ಜೀವಹಾನಿಗಳನ್ನು ಮಾಡಿದಾಗ ಅದರ ನೇರ ಪರಿಣಾಮ ಎದುರಿಸುವವರ ಬವಣೆ ವರ್ಣನಾತೀತ. ಆಗೆಲ್ಲಾ ಸಹಜವಾಗಿಯೇ ಅವುಗಳ ಮೇಲೆ ಆಕ್ರೋಶ ವ್ಯಕ್ತವಾಗುತ್ತದೆ. ಈಗ ಮಲೆನಾಡಿನ ಕೆಲವೆಡೆ ಆಗುತ್ತಿರುವುದು ಇದೇ. ತಿಳಿದೋ ತಿಳಿಯದೆಯೋ ಅನಿವಾರ್ಯ ಎಂದುಕೊಂಡು ಪ್ರಾಣಿಗಳ ವಾಸಸ್ಥಳಗಳನ್ನೆಲ್ಲಾ ನಾವು ಆಕ್ರಮಿಸಿಕೊಳ್ಳುತ್ತಿದ್ದೇವೆ. ವಿಧಿ ಇಲ್ಲದೆ ಅವೇ ಊರೊಳಗೆ ನುಗ್ಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದೇವೆ. ತೊಂದರೆಯಾದಾಗ ಮಾತ್ರ ಹಾಹಾಕಾರ ವೆಬ್ಬಿಸುತ್ತೇವೆ. ಆನೆಗಳ ಸ್ವಚ್ಛಂದ ತಿರುಗಾಟಕ್ಕೆ ಅಡ್ಡಿ ಮಾಡಿ ಅವುಗಳ ಆಹಾರ, ನೆಲೆ ನಾಶ ಮಾಡಿದ್ದೇವೆ. ಊರೊಳಗೆ ಬಂದಾಗ ಅವುಗಳನ್ನು ಕೊಲ್ಲುವ ಮಾತೂ ಬರುತ್ತದೆ. ಅಲ್ಲ, ತೊಂದರೆಗೊಳಗಾದ ಜನರೇ ತಮಗೆ ತೋಚಿದ ಯಾವುದಾದರೂ ಒಂದು ರೀತಿಯಲ್ಲಿ ಅವುಗಳನ್ನು ಕೊಲ್ಲುತ್ತಿದ್ದಾರೆ. ಇದಕ್ಕೆಲ್ಲಾ ಪರಿಹಾರವೇ ಇಲ್ಲವೇ ಇಲ್ಲ ಎಂದಲ್ಲ; ಇದೆ, ಪೂರ್ತಿಯಾಗಿ ಅಲ್ಲದಿದ್ದರೂ ಮಿತಿ ಮೀರದಷ್ಟು ಖಂಡಿತಾ ಇದೆ. ಆದರೆ ಒಬ್ಬಿಬ್ಬರು ಮಾಡುವಂಥದ್ದಲ್ಲ. ಸಂಕಲ್ಪ ಬೇಕು. ಘನಸರ್ಕಾರದ ಕೃಪೆಯಾಗಬೇಕು. ಆದಷ್ಟೂ ಈ ಅಪೂರ್ವವಾದ ಪಶ್ಚಿಮಘಟ್ಟವನ್ನು ಭೇದಿಸಬಾರದು. ಅಲ್ಲಿ ಜನ ಜಾತ್ರೆ ಕೂಡದು. ಈಗಿರುವ ಹೆದ್ದಾರಿಗಳ ಹೊರತಾಗಿ ಹೊಸ ದಾರಿಗಳನ್ನು ನಿರ್ಮಿಸಬಾರದು. ಇರುವ ರಸ್ತೆಗಳನ್ನೇ ಸುವ್ಯವಸ್ಥೆಗೊಳಿಸಬೇಕು. ಗೊತ್ತು ಗುರಿ ಇಲ್ಲದೆ ಅರೆಕಟ್ಟುಗಳನ್ನು ಕಟ್ಟಲೇ ಬಾರದು. ಹಾಗಾದರೆ ಅಭಿವೃದ್ಧಿ ಬೇಡವೇ? ಅವಶ್ಯ ಇರುವ ವಿದ್ಯುತ್ತಿನ ಉತ್ಪಾದನೆ ನಿಲ್ಲಿಸಬೇಕೇ? ಎಂದೂ ಅನಿಸಬಹುದು. ಈಗ ದುಬಾರಿ ಎನಿಸಿದರೂ ಅದನ್ನು ಬೇರೆ ಬಗೆಯಲ್ಲಿ ಉತ್ಪಾದಿಸಬೇಕು. ಲಾಭ ನಷ್ಟದ ತೂಕ ಹಾಕಿ ನೋಡಿದರೆ ಮುಂದಾಲೋಚನೆ ಇಲ್ಲದೆ ಮಾಡುವ ಈ ರೀತಿಯ ಕೆಲಸಗಳಿಂದ ಲಾಭಕ್ಕಿಂತ ಅಪಾರವಾದ ನಷ್ಟವೇ ಜಾಸ್ತಿ ಎನ್ನುವುದು ಪ್ರಕೃತಿಯ ಒಳಹೊರಗು ತಿಳಿದವರಿಗೆ ಅರ್ಥವಾಗುತ್ತದೆ. ಇದರ ಪರಿಣಾಮ ಅನುಭವಿಸುವವರು ನಮ್ಮ ಮುಂದಿನ ಪೀಳಿಗೆಯವರು. ಅಂದರೆ ನಮ್ಮ ಮಕ್ಕಳು, ಮೊಮ್ಮಕ್ಕಳು! ಇದು ಒಂದು ತರಹ ‘ಚಿನ್ನದ ಮೊಟ್ಟೆ ಇಡುವ ಕೋಳಿಯ ಹೊಟ್ಟೆ ಸೀಳಿದಂತೆ!’ ಮಳೆ ತರಿಸುವ ಮಳೆಕಾಡುಗಳು, ಪ್ರಕೃತಿಯ ಸಮತೋಲನ ಸಾಧಿಸುವ ವನ್ಯಜೀವಿಗಳು, ಇಡೀ ನಮ್ಮ ದೇಶಕ್ಕೇ ಸಾಲುವಷ್ಟು ಅಪೂರ್ವವಾದ ಔಷಧಿ ಸಂಪತ್ತನ್ನು ಹೊಂದಿದ ಸಸ್ಯಗಳು ಎಲ್ಲಕ್ಕೂ ಮೂಲ ಪಶ್ಚಿಮಘಟ್ಟಗಳ ಸಾಲುಗಳು. ಅವುಗಳ ಮೂಲಗಳನ್ನೇ ನಾಶಮಾಡಿ ನಾವು ಸುಖಪಡುವುದಲ್ಲ. ಅದಕ್ಕೆ ಹಾನಿ ಮಾಡದೆ ಅದರಿಂದ ಸಿಗುವ ಲಾಭವನ್ನು ಪಡೆಯುವುದೇ ವಿವೇಚನೆ. ತೊಂದರೆ ಕೊಡುವ ಆನೆಗಳಂತಹಾ ಪ್ರಾಣಿಗಳು ಊರಿಗೆ ಬಂದರೆ ಅಲ್ಲಿನ ಜನಗಳ ಬದುಕು ನರಕವಾಗುತ್ತದೆ. ಅದಕ್ಕೂ ವ್ಯವಸ್ಥೆಯಾಗಬೇಕು. ಕೆಲವೆಡೆ ತಡೆಗೋಡೆ, ಕೆಲವೆಡೆ ಕಂದಕಗಳನ್ನು ತೋಡಿಯಾದರೂ ಅವು ಊರಿಗೆ ಬಾರದಂತೆ ತಡೆಯಬೇಕು. ಗುಡ್ಡ, ಬೆಟ್ಟ, ತೊರೆ, ಪ್ರಪಾತಗಳಿರುವ ಸಾವಿರಾರು ಕಿ.ಮೀ. ಉದ್ದಕ್ಕೆಲ್ಲಾ ಅದನ್ನು ಮಾಡುವುದೆಂತು? ಎನಿಸಬಹುದು. ವಿಪರೀತ ಖರ್ಚಿನ ಬಾಬ್ತು ನಿಜ, ಆದರೆ ಯಾವ್ಯಾವುದಕ್ಕೋ ಕೋಟಿ ಕೋಟಿ ಖರ್ಚು ಮಾಡುವ ನಮಗೆ ಅದು ಖಂಡಿತಾ ಅಸಾಧ್ಯವಲ್ಲ. ಅಲ್ಲದೆ ಚೀನದ ಮಾಹಾಗೋಡೆಯ ಮುಂದೆ ಇದೆಷ್ಟರ ಕೆಲಸ? ಮನಸ್ಸಿದ್ದರೆ ಮಾರ್ಗ!
-
-40%
ಅರಮನೆ ಗುಡ್ಡದ ಕರಾಳ ರಾತ್ರಿಗಳು
0ಪಶ್ಚಿಮಘಟ್ಟ ಎಂದರೇ ಮಿಸ್ಟರಿಗಳು ತುಂಬಿಕೊಂಡ ಪ್ರದೇಶ. ಅದರೊಳಗೇನಿದೆ ಎಂದು ಇಂದಿಗೂ ಸ್ಪಷ್ಟವಾಗಿಲ್ಲ. ಎಂದಿಗೂ ಆಗುವುದಿಲ್ಲ. ಅಷ್ಟು ನಿಗೂಢತೆ ಇದೆ ಅದರೊಳಗೆ. ಅದರ ಪಕ್ಕದಲ್ಲೇ ಹುಟ್ಟಿ ಬೆಳೆದವರಿಗೆ ಒಂದಿಷ್ಟು ಅದರ ಬಗ್ಗೆ ತಿಳಿದಿರುತ್ತದೆ. ಅಂದರೆ ಅಲ್ಲಿಯ ಪ್ರಾಣಿ-ಪಕ್ಷಿ, ವಾತಾವರಣ, ಕಾಡುದಾರಿಗಳ ಬಗ್ಗೆ ಒಂದಿಷ್ಟು ಅರಿತಿರುತ್ತಾರೆ ಅಷ್ಟೆ.
-
-40%
ಜೇನುಕಲ್ಲಿನ ರಹಸ್ಯ ಕಣಿವೆ
0ಜೇನುಕಲ್ಲಿನ ರಹಸ್ಯ ಕಣಿವೆ
(ಮಲೆನಾಡಿನ ರೋಚಕ ಕತೆಗಳು-೪)
ಕಾದಂಬರಿ
ಗಿರಿಮನೆ ಶ್ಯಾಮರಾವ್
ಈ ಪಶ್ಚಿಮಘಟ್ಟ ಅದ್ಭುತ, ರಮ್ಯ, ಅಪರೂಪದ ಜೀವ-ಸಸ್ಯಗಳ ತಾಣ. ಆದರೆ ಅದು ಸುತ್ತಲಿಂದ ಇಂಚಿಂಚಾಗಿ ನಶಿಸುತ್ತಿದೆ. ಬಹುಶಃ ನಮ್ಮ ಕಾಲ ಮುಗಿಯುವುದರೊಳಗೆ ಅದರ ಸಹಜ ಸೌಂದರ್ಯ ಮಾಸಬಹುದು. ಮುಂದಿನ ಪೀಳಿಗೆಯವರಿಗೆ ಅದರ ಮತ್ತೊಂದು ರೂಪವೇ ಕಾಣಲು ಸಿಗಬಹುದು. ಹಾಗಾಗುವ ಮೊದಲೇ ಅದರ ಒಂದೊಂದೇ ಮಗ್ಗುಲನ್ನು ಪ್ರತಿಯೊಂದು ಕಾದಂಬರಿಯಲ್ಲೂ ಪದರು ಪದರಾಗಿ ಬಿಚ್ಚಿಡುತ್ತಾ ಹೋಗುವ ಉದ್ದೇಶ ಇಲ್ಲಿದೆ. ಕೋಟ್ಯಂತರ ವರ್ಷಗಳಿಂದ ಅಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದ ವನ್ಯಜೀವಿಗಳ ಬದುಕು ಒಮ್ಮೆಲೇ ಈ ಶತಮಾನದಲ್ಲಿ ಘೋರವಾಗಿ ಜೀವಜಾಲದ ಸರಪಳಿ ಕಡಿಯುತ್ತಿದೆ. ಮಾಡಿದ ಕರ್ಮಗಳು ಬದುಕಿಗೆ ಮತ್ತೊಂದು ರೀತಿಯಲ್ಲಿ ಸುತ್ತಿಕೊಳ್ಳುತ್ತದಾ? ಅದು ಬೇಗ ಕಣ್ಣಿಗೆ ಕಾಣದಿದ್ದರೂ ಬದುಕನ್ನು ಆಳವಾಗಿ ನೋಡಿದಾಗ ಅಲ್ಲ ಎನ್ನಲು ಬರುವುದಿಲ್ಲ. `ಮಾಡಿದ್ದನ್ನು ಅನುಭವಿಸಲೇಬೇಕು’ ಎನ್ನುವುದು ಜಗತ್ತಿನ ನಿಯಮವೇ ಆಗಿರಬೇಕು. ಇವೆಲ್ಲದರ ಒಳನೋಟ ಈ ಕಾದಂಬರಿಯಲ್ಲಿದೆ. -
-40%
ತಲೆಬುರುಡೆ ಬಿಡಿಸಿದ ಕೊಲೆ ರಹಸ್ಯ
0ತಲೆ ಬುರುಡೆ
ಬಿಡಿಸಿದ ಕೊಲೆ ರಹಸ್ಯ
ಮೂಲ : ಶ್ರೀ ಕೆ. ರಾಮಯ್ಯ ರೈ
ಅನುವಾದ: ಕೆದಂಬಾಡಿ ಜತ್ತಪ್ಪ ರೈ
ಸಮಾಜದ ಈ ಸ್ವಾಸ್ಥ್ಯ ಕಾಪಾಡಲು ನಾವೇ ಪೊಲೀಸ್ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪೊಲೀಸರು ನಾಗರಿಕರ ಸ್ನೇಹಿತರಾಗಿದ್ದರೆ ಅದರಿಂದ ಎಲ್ಲರಿಗೂ ಹಿತ. ಒಳ್ಳೆಯ ಪೊಲೀಸ್ ಅಧಿಕಾರಿಗಳಿಗೆ ಯಾವತ್ತೂ ಜನರ ನೈತಿಕ ಬೆಂಬಲ ಸಿಕ್ಕಿಯೇ ಸಿಗುತ್ತದೆ. ಪೊಲೀಸರೇ ನಾಗರಿಕರ ಸಹಕಾರ ಪಡೆಯದೆ ದೂರ ಸರಿದರೆ ಈ ಮಾತು ವಿರೋಧಾಭಾಸದ್ದು ಅನಿಸುತ್ತದೆ.
ಆದರೆ ನಮ್ಮ ನಡುವೆ ಶ್ರೀ ಕೆ. ರಾಮಯ್ಯ ರೈ ಅವರಂಥ ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳೂ ಇದ್ದರು. ಅವರ ಅನುಭವ ನೆನಪುಗಳೇ ಇಂದಿನವರಿಗೆ ಆದರ್ಶವಾಗಲಿ. ಅವರ ಸ್ವಾನುಭವದ ಸತ್ಯಕಥೆ ‘ತಲೆಬುರುಡೆ’ ಕಾದಂಬರಿ ರೂಪದಲ್ಲಿ ಸ್ವಾರಸ್ಯಕರವಾಗಿ ಹರಿದು ಬಂತು. -
-40%
ವಿಚ್ಛೇದನಾ ಪರಿಣಯ
0ವಿಚ್ಛೇದನಾ ಪರಿಣಯ
ಕತೆಯನ್ನು ಹುಡುಕುವ ಒಂದು ಕಾದಂಬರಿ
ಸುಮಾರು ಏಳೆಂಟು ತಿಂಗಳ ಕಾಲಾವಧಿಯಲ್ಲಿ ಬರೆದ ಈ ಕಾದಂಬರಿಯ ಈ ರೂಪಕ್ಕೆ ಕಾರಣರಾದವರು ರಚನೆಯ ಬೇರೆ ಬೇರೆ ಹಂತಗಳಲ್ಲಿ ಓದಿ ತಮ್ಮ ಮೆಚ್ಚುಗೆ-ಟೀಕೆ-ನಿರೀಕ್ಷೆಗಳನ್ನು ತಿಳಿಸಿದ ಆತ್ಮೀಯರು. ಈ ಆತ್ಮೀಯರಿಗೆಲ್ಲ ಕೃತಜ್ಞನಾಗಿದ್ದೇನೆ. -
-40%
ಕರಾಳ ಗರ್ಭ
0ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು ಒಂದು ರಹಸ್ಯಮಯ ಪತ್ತೇದಾರಿ ಕಾದಂಬರಿಯಾಗಿದೆ.
-
-40%
ಸುವರ್ಣ ಕರಾವಳಿ
0ಸುವರ್ಣ ಕರಾವಳಿ
ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು ಒಂದು ರಹಸ್ಯಮಯ ಪತ್ತೇದಾರಿ ಕಾದಂಬರಿಯಾಗಿದೆ. -
-40%
ಮುಳುಗುವ ಕೊಳ
0ಮುಳುಗುವ ಕೊಳ
ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು ಒಂದು ರಹಸ್ಯಮಯ ಪತ್ತೇದಾರಿ ಕಾದಂಬರಿಯಾಗಿದ್ದು ಪೊಲೀಸರು ಕೊಲೆಗಾರರನ್ನು ಹೇಗೆ ಪತ್ತೆ ಮಾಡುತ್ತಾರೆ ಎಂಬುದನ್ನು ಈ ಕಾದಂಬರಿಯಲ್ಲಿ ವಿವರಿಸಿದ್ದಾರೆ. ಕೊಲೆಗಾರರು ಪೋಲೀಸರ ಜೊತೆಯಲ್ಲೇ ಇದ್ದು ಪೊಲೀಸರಿಗೆ ಯಾವುದೇ ರೀತಿಯ ಸಂಶಯ ಬರದಂತೆ ನಡೆದುಕೊಂಡು ಅವರು ಯಾವ ರೀತಿ ದಾರಿ ತಪ್ಪಿಸಲು ನೋಡುತ್ತಾರೆ ಎಂಬುದನ್ನು ತಿಳಿಸಿದ್ದಾರೆ ಹೀಗಾಗಿ ಈ ಕಾದಂಬರಿಯು ತುಂಬಾ ಕುತೂಹಲಕಾರಿಯಾಗಿದೆ. -
-40%
ಕೆಂಗುಲಾಬಿ
0ವೇಶ್ಯಾ ಜಗತ್ತಿನ ಅನಾವರಣ
ಅಂದಿನ ದೇವದಾಸಿಯರಿಂದ , ಇಂದಿನ ಕಾಲ್ ಗರ್ಲ್ಸ್ ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೆಣ್ಣಿನ ಕುರಿತ ಹಾಗೆ ಬರೆದದ್ದು ಸಮುದ್ರದಷ್ಟಿದೆ. ಅದರಲ್ಲಿಯೂ ವೇಶ್ಯಾ ಸಮಸ್ಯೆಯ ಕುರಿತ ಹಾಗೇ ಬರೆಯದ ಲೇಖಕರೆ ಇಲ್ಲ ಎನ್ನುವಷ್ಟು ಸಾಹಿತ್ಯ ಬಂದಿದೆ. ಆದರೆ ಬರೆದವರೆಲ್ಲರ ಕಣ್ಣಲ್ಲಿ ಪಸೆಯಿರಲಿಲ್ಲವೆಂಬುದು ವಿಷಾದದ ಸಂಗತಿ. ಹೆಣ್ಣಿನ ದೇಹ ಸಂಬಂಧಿ ಸಂಗತಿಗಳ ಬಗ್ಗೆ ಇರುವ ಕೆಟ್ಟ ಕುತೂಹಲದಿನದ ಹೆಣ್ಣಿನ ಮನಸ್ಸನ್ನು ಮುಟ್ಟುವುದು ಸಾಧ್ಯವಾಗಲೇ ಇಲ್ಲ. ಇಡೀ ನಮ್ಮ ಬದುಕಿನುದ್ದಕ್ಕೂ ಹೆಣ್ಣು ಕಪ್ಪು, ಬಿಳುಪಿನ ಪಾತ್ರದಲ್ಲಿ ಕಾಣಿಸುತ್ತಿರುವ ಕಾರಣದಿಂದ ಸ್ತ್ರೀ ಲೋಕದಲ್ಲಿಯೇ ಪರಸ್ಪರ ಹಗೆತನ ಮನೆ ಮಾಡಿದೆ. ಗರತಿ, ಗಣಿಕೆ, ಗಯ್ಯಾಳಿ ಪಾತ್ರಗಳನ್ನು ಸೃಷ್ಟಿಸಿದ ವ್ಯವಸ್ಥೆಯನ್ನು ಅರ್ಥೈಸುವುದರಲ್ಲಿ ವಿಫಲರಾದ ಕಾರಣದಿಂದಲೇ ಇಂದಿಗೂ ವೇಶ್ಯಾ ಸಮಸ್ಯೆ ಕುರಿತು ಬರೆಯುವ, ಮಾತನಾಡುವ ಮಾತುಗಳಿಗೆ ಸಾಮಾಜಿಕ ನೈತಿಕ ಹೊಣೆಗಾರಿಕೆಯನ್ನು ಹೊರಲು ಆಗುತ್ತಿಲ್ಲ. ಅತ್ಯಂತ ಅಮಾನವೀಯ ಈ ಸಾಮಾಜಿಕ ಸಮಸ್ಯೆಯೊಳಗಿನ ಸಂಕಟ ಅರ್ಥವಾಗುತ್ತಿಲ್ಲವೆಂಬ ನೋವು ಕೈಬೆರಳೆಣಿಕೆಯ ಲೇಖಕರನ್ನಾದರೂ ಕಾಡಿದೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕೆಲವು ಕೃತಿಗಳಾದರೂ ನಮ್ಮೆದುರಿಗಿವೆ. ಅಂತಹ ಕೃತಿಗಳ ಸಾಲಿಗೆ ಹನುಮಂತ ಹಾಲಿಗೇರಿಯ ‘ಕೆಂಗುಲಾಬಿ’ ಸೇರುತ್ತದೆ. -
-40%
ಕರ್ಮ
0ಕರ್ಮ
ಭೌತಿಕವಾಗಿಯೂ ಪಾರಮಾರ್ಥಿಕವಾಗಿಯೂ ಶ್ರದ್ಧೆ ಮತ್ತು ನಂಬಿಕೆಯ ನಡುವಿನ ವ್ಯತ್ಯಾಸ ಇದ್ದೇ ಇದೆ. ಈ ವ್ಯತ್ಯಾಸವನ್ನು ಪ್ರಾಯೋಗಿಕವಾಗಿ ಈ ಕೃತಿಯಲ್ಲಿ ಚರ್ಚಿಸಲಾಗಿದೆ.
ಪ್ರಸ್ತುತ ನಗರ ಸಮಾಜದಲ್ಲಿನ ವ್ಯಕ್ತಿ ತನ್ನ ತಂದೆಯ ಸಾವಿನ ನಂತರ ತನ್ನ ಊರಿಗೆ ಅಪ್ಪನ ಕ್ರಿಯೆ ಮಾಡಲು ಹೋಗಿ ಆ ಅಪರಕ್ರಿಯೆಯ ದಿನಗಳಲ್ಲಿ ಸಂಭವಿಸುವ ತೊಳಲಾಟ, ಭೂತ, ವರ್ತಮಾನಗಳ ಜಗ್ಗಾಟ, ಬಂಧಗಳ ಮನೋ ವ್ಯಾಪಾರ ಇವೆಲ್ಲವನ್ನೂ ಸಮಕಾಲೀನ ಶೈಲಿಯಲ್ಲಿ ಕಟ್ಟಿಕೊಟ್ಟಿರುವ ಕಾದಂಬರಿ ಕರ್ಮ. ಬಿಡುಗಡೆಯಾದ ಎರಡೇ ವರ್ಷದಲ್ಲಿ ನಾಲ್ಕು ಮುದ್ರಣಗಳನ್ನು ಕಂಡಿರುವ ಈ ಕೃತಿ ಅಪಾರ ಜನಮನ್ನಣೆ ಮತ್ತು ತಾತ್ವಿಕ ಚರ್ಚೆಯನ್ನು ಸಾಹಿತ್ಯ ವಲಯದಲ್ಲಿ ಹುಟ್ಟುಹಾಕಿದೆ. ನಾಟಕಕಾರ ಮತ್ತು ಕಾದಂಬರಿಕಾರರಾದ ಕರಣಂ ಪವನ್ ಪ್ರಸಾದರ ಮೊದಲ ಕಾದಂಬರಿಯಿದು.