-
-40%
ತೇರು
0ತೇರು ಕೃತಿಯನ್ನು ನಾವು ನೀಳ್ಗತೆಯಂತೆಯೂ ನೋಡಬಹುದು. ಅಥವಾ ಅದನ್ನು ಒಂದು ಜಾನಪದ / ಜನಾಂಗಿಕ ಅಧ್ಯಯನದಂತೆಯೂ ನೋಡಬಹುದು.
ತೇರು ಕೃತಿಯೂ ಧರಮನಟ್ಟಿ ದೇಸಗತಿಯ ಸ್ಥಾಪನೆಯ ಕಾಲದಿಂದಲೇ ಪ್ರಾರಂಭ ವಾಗುತ್ತದೆ. ಹೊಸ ದೇಸಾಯಿ ಧರಮನಟ್ಟಿಯಲ್ಲಿ ತನ್ನ `ಮನೆ ದೇವರಾದ’ ವಿಠ್ಠಲನ ಒಂದು ಭವ್ಯ ದೇವಾಲಯವನ್ನು ಕಟ್ಟಿಸುತ್ತಾನೆ. ಹೊನ್ನ ಕಳಸದ, ಬೃಹತ್ ಕಲ್ಲಿನ ಚಕ್ರಗಳ, ಆ ದೇವಾಲಯದ ತೇರು ಇಡೀ ದೇಸಗತಿಯ ಪ್ರತಿಷ್ಠೆಯ ಸಂಕೇತ. -
-40%
ಮುಖಾಂತರ
0ಮುಖಾಂತರ
‘ಮುಖಾಂತರ’ ಸಾವಧಾನದ ಲಯದಲ್ಲಿ ನಿರೂಪಿತವಾಗಿರುವ ಕಾದಂಬರಿ. ಇತ್ತೀಚೆಗೆ ಅಪರೂಪವಾಗುತ್ತಿರುವ ಈ ಲಯವೇ ಈ ಕಾದಂಬರಿಯ ಆಶಯ ಆಕೃತಿಯನ್ನು ರೂಪಿಸಿದೆ. ಹೀಗಾಗಿ ವೇಗಕ್ಕೆ ದಕ್ಕದ ಅನೇಕ ಸೂಕ್ಷ್ಮಗಳು ಈ ಕಾದಂಬರಿಯ ಬಂಧದಲ್ಲಿ ಸಹಜವೆಂಬಂತೆ ಸೇರಿಕೊಂಡಿವೆ. ದಟ್ಟ ಜೀವನಾನುಭವದ ಹೆಣಿಗೆಯಲ್ಲಿ ಸಿದ್ಧವಾಗಿರುವ ‘ಮುಖಾಂತರ’ದಲ್ಲಿ ಮೊಗಸಾಲೆಯವರು ಒಂದು ಕುಟುಂಬದ ಕತೆಯನ್ನು ಹೇಳುತ್ತಲೇ ನಾಡಿನ ಜಗತ್ತಿನ ವಿದ್ಯಮಾನಗಳನ್ನು ಹಾಸು ಹೊಕ್ಕಾಗಿ ಸೇರಿಸಿದ್ದಾರೆ. ಸ್ಥಳೀಯ ಸತ್ವವನ್ನು ಒಳಗೊಳ್ಳುತ್ತಲೇ ಜಾಗತಿಕ ಆಗು ಹೋಗುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ‘ಮುಖಾಂತರ’ದ ವಿಸ್ತಾರ ಬೆರಗು ಮೂಡಿಸುತ್ತದೆ.
ಸಂಬಂಧಗಳ ಜಟಿಲತೆ, ಸ್ತ್ರೀ ಜಗತ್ತಿನ ತಲ್ಲಣಗಳು, ಆಸ್ತಿ ಅಧಿಕಾರದ ದರ್ಪ, ಅಂತಃಕರಣ ಜಗತ್ತಿನ ಆರ್ದ್ರತೆ. ಜಾಗತೀಕರಣ ಕಬಂಧ ಬಾಹು, ಆಕಸ್ಮಿಕಗಳು ಬದುಕನ್ನು ರೂಪಿಸುವ ವಿಸ್ಮಯ, ವರ್ಗ ಸಂಘರ್ಷ ಅನಿಯಂತ್ರಿತ ಆಕರ್ಷಣೆಯ ಸ್ವರೂಪ. ಈ ಎಲ್ಲವನ್ನೂ ಮೀರಿದ ನಿರ್ಲಿಪ್ತತೆ ಹೀಗೆ ಹಲವು ನೆಲೆಗಳನ್ನು ಒಳಗೊಂಡಿದೆ. -
-40%
ಸಂಗೀತ ಸಮ್ಮೋಹಿನಿ
0ಸಂಗೀತ ಸಮ್ಮೋಹಿನಿ :
(ವೈಜ್ಞಾನಿಕ ಕಾದಂಬರಿ)೨೦೨೦ರ ಸುಮಾರಿಗೆ ಕಂಪ್ಯೂಟರ್ ವಿಜ್ಞಾನ ಸ್ಥಿತ್ಯಂತರ ಪಡೆಯುತ್ತದೆ. ದ್ವಿಮಾನ (ಬೈನರಿ) ಬದಲು ತ್ರಿಮಾನ ಪದ್ಧತಿಯನ್ನು ಅಳವಡಿಸಿದಾಗ ಕಂಪ್ಯೂಟರುಗಳು ಸೃಜನಾತ್ಮಕತೆಯನ್ನು ಮೈಗೂಡಿಸಿಕೊಳ್ಳುತ್ತವೆ . ಮನುಷ್ಯರೊಂದಿಗೆ ಪೈಪೋಟಿಗಿಳಿಯುತ್ತವೆ. ಸಂಗೀತ ಕ್ಷೇತ್ರವು ಇದಕ್ಕೆ ಹೊರತಾಗುವುದಿಲ್ಲ. ಒಂದು ಡೂರೋ ‘ಸಮ್ಮೋಹಿನಿ‘ ರಾಗವನ್ನು ಸೃಷ್ಟಿಸಿ ಪ್ರಸ್ತುತಪಡಿಸುತ್ತದೆ. ಸಂಗೀತ ಕ್ಷೇತ್ರದಲ್ಲಿ ಹೊಸ ಅಲೆಯ ಕಂಪನಗಳನ್ನೆಬ್ಬಿಸುವ ಕಾದಂಬರಿ.
-
-40%
ತಂತ್ರಯೋನಿ
0ತಂತ್ರಯೋನಿ
‘ತಂತ್ರಯೋನಿ’ ಗ್ರಂಥ ತಂತ್ರದ ಶಾಸ್ತ್ರವನ್ನು ಕುರಿತು ವಿವರವಾಗಿ ಹೇಳುತ್ತದೆ. ತಂತ್ರ ಒಂದು ರಹಸ್ಯವಿದ್ಯೆ. ಈ ವಿದ್ಯೆಯನ್ನು ಗುರುವಿನಿಂದ ಪಡೆಯಲು ಶಿಷ್ಯ ಅಧಿಕಾರಿಯಾಗಿರಬೇಕು. ‘ಅಶಿಷ್ಯಾಯ ನ ದೇಯಂ’ ಎನ್ನುವದು ಇಂಥ ವಿದ್ಯೆಗಳಿಗೆ ಒಂದು ನಿಷೇಧವಾಕ್ಯ. ದೀಕ್ಷೆ, ಧ್ಯಾನ, ಜಪ, ಮಂತ್ರ ಮೊದಲಾದವುಗಳು ಕೂಡ ತಂತ್ರವಿದ್ಯೆಯ ಅಂಗಗಳಾಗಿರುವುದರಿಂದ ಅವುಗಳನ್ನು ಕುರಿತು ಸಾಕಷ್ಟು ವಿವರಗಳನ್ನು ಈ ಗ್ರಂಥದಲ್ಲಿ ನೀಡಲಾಗಿದೆ. -
-40%
ಸೋಲು ಗೆದ್ದವನದ್ದು!
0ಸೋಲು ಗೆದ್ದವನದ್ದು!
ನಕ್ಸಲ್ ಹಾಗು ಪೊಲೀಸರ ನಡುವಿನ ಸಂಘರ್ಷದ ಕಥಾಹಂದರ ಒಳಗೊಂಡಿದೆ.‘ಸೋಲು ಗೆದ್ದವನದ್ದು!’ ಕಾದಂಬರಿ ನಕ್ಸಲರು ಮತ್ತು ಪೊಲೀಸರ ನಡುವಿನ ‘ಮಾಡು ಇಲ್ಲವೇ ಮಡಿ’ ಸಮರಕ್ಕೆ ಸಂಬಂಧಿಸಿದ ಕಥಾನಕವೆಂಬಂತೆ ಮೇಲ್ನೋಟಕ್ಕೆ ತೋರಿದರೂ ಅದರ ಆಂತರ್ಯದಲ್ಲಿ ಮನುಷ್ಯನೊಳಗಿನ ಜೀವನ ಪ್ರೀತಿ, ನೋವು, ನಲಿವು, ಆಸೆ, ಹತಾಶೆ, ಮುಗ್ಧತೆ, ಕ್ರೌರ್ಯ ಎಲ್ಲವೂ ಹುದುಗಿದೆ.
ಇಲ್ಲಿನ ಕಥಾಹಂದರ ಕಾಲ್ಪನಿಕವೇ ಆಗಿದ್ದರೂ, ಅಲ್ಲಲ್ಲಿ ಎದುರಾಗುವ ಸನ್ನಿವೇಶಗಳು ಕಲ್ಪನೆಯ ಪರದೆ ಹೊದ್ದುಕೊಂಡಿರುವ ನೈಜ ಘಟನೆಗಳೆಂಬಂತೆ ಭಾಸವಾಗುತ್ತವೆ. -
-40%
ಹೊಳೆಮಕ್ಕಳು
0ಇದು ಬಿದರಹಳ್ಳಿ ನರಸಿಂಹಮೂರ್ತಿಯವರ ಕಾದಂಬರಿ.
-
-39%
ಅಕ್ಷಯಪಾತ್ರೆ
0ಅಕ್ಷಯಪಾತ್ರೆ
(ಕಾಂದಬರಿ)
ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಲೋಕದಲ್ಲಿ ಸಾಹಸ ಕಥೆ ಕಾದಂಬರಿಗಳು ಕಮ್ಮಿಯಾಗಿವೆ. ಮೊದಲೇ ಕನ್ನಡ ಸಾಹಿತ್ಯವು ಓದುಗರ ಕ್ಷಾಮವನ್ನು ಎದುರಿಸುತ್ತಿದೆ. ಟಿವಿ, ಸಿನಿಮಾದ ಅಬ್ಬರದಲ್ಲಿ ಕಾದಂಬರಿ ಓದಿಗರ ಸಂಖ್ಯೆ ಕಡಿಮೆಯಾಗಿದೆ. ಅದರಲ್ಲೂ ಯುವವರ್ಗ ಸಾಹಿತ್ಯ ಕ್ಷೇತ್ರದತ್ತ ನಿರಾಸಕ್ತಿ ಹೊಂದಿದೆ. ಇಂತಹ ವಿಷಮ ಘಟ್ಟದಲ್ಲಿ ಮಿತ್ರ ಶ್ರೀ ಎಚ್.ಜಿ.ಮಳಗಿಯವರು ರೋಚಕ ಸಾಹಸ ಕಾದಂಬರಿಯನ್ನು ಕನ್ನಡ ಓದುಗರಿಗೆ ನೀಡುವ ಸಾಹಸ ಮಾಡಿದ್ದು ಅಭಿನಂದನೀಯ. ಮಹಾಭಾರತ ಕಾಲದ ಅಕ್ಷಯಪಾತ್ರೆಯನ್ನು ಹುಡುಕಿಕೊಂಡು ಪ್ರಾಚ್ಯವಸ್ತು ಸಂಶೋಧನಾ ತಂಡವು ದೂರದ ಅಫಘಾನಿಸ್ತಾನಕ್ಕೆ ಹೋಗಿ ಅಲ್ಲಿ ಭಯೋತ್ಪಾದರಿಂದ, ಖಳನಾಯಕನಿಂದ ಅನೇಕ ತೊಂದರೆಗಳನ್ನು ಎದುರಿಸಿ ಬರುವ ರೋಚಕ ಕಥಾವಸ್ತುವನ್ನು ಹೊಂದಿದೆ. ಕ್ಷಣಕ್ಷಣಕ್ಕೂ ಎದುರಾಗುವ ಅಪಾಯಗಳು, ವಿಕ್ಷಿಪ್ತ ಖಳನಾಯಕನ ಕ್ರೂರ ನಡೆಗಳು. ನಾಯಕನ ಮೈನವಿರೇಳಿಸುವ ಸಾಹಸಗಳು, ನಾಯಕಿಯ ಅಹಂ, ಸಿಟ್ಟು, ಅಸಹಾಯಕತೆ ಎಲ್ಲವೂ ರೋಚಕತೆಗೆ ಮೆರಗನ್ನು ತಂದಿವೆ. ನಾಯಕಿ ಅಫಘಾನಿಸ್ತಾನದ ಹಳ್ಳಿಯ ತಾಂಡಾವೊಂದರಲ್ಲಿ ಅಲ್ಲಿನ ನೃತ್ಯಗಾತಿಯೊಂದಿಗೆ ಸ್ಪರ್ಧೆಗೆ ಬಿದ್ದು ನೃತ್ಯ ಮಾಡುವುದಂತೂ ಥೇಟ್ ಹಿಂದೀ ಚಿತ್ರದಲ್ಲಿ ಬರುವ ಸನ್ನಿವೇಶದಂತಿದೆ. -
-40%
ಲಿಲ್ಲಿ ಪುಟ್ಟ
0ಲಿಲ್ಲಿ ಪುಟ್ಟ
ಲಿಲ್ಲಿ ಪುಟ್ಟ ಸಹಜ ಲಹರಿಯಲ್ಲಿ ಹರಿದು ಬರುವ ಕಾದಂಬರಿ. ರೋಚಕತೆ ಮತ್ತು ನಾಟಕೀಯತೆ ಇದರ ಪ್ರಧಾನ ಗುಣಗಳು. ಪಕ್ಕ ಧಾರವಾಡದ ಶೈಲಿ ಭಾಷಾ ಸೊಗಡು, ತಿಳಿ ಹಾಸ್ಯ, ದಟ್ಟ ಪಾತ್ರ ಚಿತ್ರಿಕತೆ, ಇಲ್ಲಿಯ ಸತ್ವವಾಗಿದೆ. ಯಾರಾದರು, ಎಂದಾದರೂ ತಮ್ಮ ಯವ್ವನದಲ್ಲಿ ಅನುಭವಿಸಿರಬಹುದಾದ ಕಥಾಕೋಷ ಇಲ್ಲಿಯದು. ಏಕಕಾಲಕ್ಕೆ ಸೀರಿಯಲ್ ಮತ್ತು ಸಿನೇಮಾ ಶೈಲಿ ಈ ಕಾದಂಬರಿಯ ಕಥಾ ಕೇಂದ್ರ ಯವ್ವನದ ರೋಚಕ ದಿನಗಳದ್ದಾಗಿದ್ದರಿಂದ ಒಂದು ವರ್ಗದ ಓದುಗರಿಗೆ ಗಕ್ಕನೆ ಹಿಡಿಯಬಲ್ಲ ಶಕ್ತಿ ಇದಕ್ಕಿದೆ. -
-40%
ಸರದಿ
0ಸರದಿ
ಡಾ.ನಾ. ದಾಮೋದರ ಶೆಟ್ಟಿ ಅವರ ‘ಸರದಿ’ ಕಾದಂಬರಿಯು ಆಧುನಿಕತೆ ಮತ್ತು ಜಾಗತಿಕರಣದ ಪರಿಣಾಮವಾಗಿ ನಮ್ಮ ಸಾಂಪ್ರದಾಯಿಕ ಕುಟುಂಬ ವ್ಯವಸ್ಥೆ ಸಾಗುತ್ತಿರುವ ದಾರಿ ಎಲ್ಲೆಡೆಯೂ ಅಭಯಾಶ್ರಮದ ಕಡೆ ಚಲಿಸುತ್ತಿರುವ ದೃಶ್ಯಗಳನ್ನು ಚಿತ್ರಿಸುತ್ತದೆ. ಈ ಎಲ್ಲ ಸಂದರ್ಭಗಳಲ್ಲಿ ಆಶ್ರಮ ಸೇರುತ್ತಿರುವವರೆಲ್ಲಾ ಹೆಂಗಸರು ಮತ್ತು ತಾಯಂದಿರು ಎನ್ನುವುದು ವಿಶೇಷವಾದುದು. ಈ ಕಾದಂಬರಿಯು ಕುಟುಂಬ ಮತ್ತು ತಾಯಿಯನ್ನು ಕೇಂದ್ರವಾಗಿ ಇಟ್ಟುಕೊಂಡು ಈ ಕಾಲದ ಭಿನ್ನ ಅನನ್ಯತೆಗಳ ನಡುವಿನ ಸಂಘರ್ಷ ಮತ್ತು ಅದರಿಂದ ಸಂಭವಿಸುವ ನೋವು, ಅದನ್ನು ನಿವಾರಿಸಲು ಮಾಡುವ ಪ್ರಯತ್ನಗಳು – ಹೀಗೆ ಅನೇಕ ಸಂಗತಿಗಳನ್ನು ಚರ್ಚಿಸುತ್ತದೆ. -
-40%
ಪಾಚಿ ಕಟ್ಟಿದ ಪಾಗಾರ
0ಪಾಚಿ ಕಟ್ಟಿದ ಪಾಗಾರ
(ಕಾದಂಬರಿ)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಬದುಕನ್ನು ಕಣ್ಣಿಗೆ ಕಟ್ಟುವಂತೆ ಕಾದಂಬರಿಗಾರ್ತಿ ಮಿತ್ರಾ ವೆಂಕಟರಾಜ ಈ ಕಾದಂಬರಿಯಲ್ಲಿ ಬರುವ ಪಾತ್ರಗಳು ಜೀವನದಲ್ಲಿ ಎದುರಾಗುವ ಘಟನೆಗಳಿಗೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಮತ್ತು ಹಳ್ಳಿಯಲ್ಲಿ ಪ್ರಮುಖವಾಗಿರುವ ಕುಟುಂಬಗಳ ರೀತಿ ನೀತಿಗಳ ಇತರ ಸಾಧಾರಣ ಕುಟುಂಬಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತವೆ ಎಂಬುದನ್ನು ಸವಿವರವಾಗಿ ಚಿತ್ರಿಸಲಾಗಿದೆ. ಮಿತ್ರಾ ವೆಂಕಟರಾಜ ಅವರು ಎರಡು ಭಾಗಗಳಲ್ಲಿ ಕಾದಂಬರಿಯ ಒಟ್ಟು ಜೀವನದ ಪರಂಪರೆ ಅಳಿಸಿಹೋಗದಹಾಗೆ ಚಿತ್ರಿಸಿ ಮುಂದಿನ ತಲೆಮಾರಿಗೆ ದಾಖಲೆ ಉಳಿಸಿದ್ದಾರೆ. -
-40%
ಸತ್ತು ಹುಟ್ಟಿದ್ದು
0ಸತ್ತು ಹುಟ್ಟಿದ್ದು
(ವೈದ್ಯಕೀಯ ರೋಮಾಂಚಕಾರಿ ಕಾದಂಬರಿ)
ಇದು ಶ್ರೀಮತಿ ರೋಹಿಣಿ ನಿಲೇಕಣಿ ಅವರ ಪೆಂಗ್ವಿನ್ ಪ್ರಕಾಶಕರಿಂದ ಇಂಗ್ಲೀಷನಲ್ಲಿ “ಸ್ಟಿಲ್ ಬಾರ್ನ್” ಎಂಬ ಹೆಸರಿನಲ್ಲಿ ಪ್ರಕಟವಾಗಿದ್ದು ಇದನ್ನು ಆರ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. -