Description
ಹಯವದನ
ಶ್ರೀ ಗಿರೀಶ ಕಾರ್ನಾಡರ ‘ಹಯವದನ’ ನಾಟಕವು ಎಪ್ಪತ್ತರ ದಶಕದಲ್ಲಿ ಅವರು ಹೋಮಿಭಾಭಾ ಫೆಲೋಶಿಪ್ ಪಡೆದು ಧಾರವಾಡದಲ್ಲಿದ್ದಾಗ ಬರೆದದ್ದು. ಈ ನಾಟಕಕ್ಕೆ ರಾಷ್ಟ್ರಮಟ್ಟದ ಕಮಲಾದೇವಿ ಚಟ್ಟೋಪಾಧ್ಯಾಯ ಪ್ರಶಸ್ತಿಯೂ ದೊರಕಿದೆ. ಶ್ರೀ ಸತ್ಯದೇವ ದುಬೆ, ಬಿ.ವಿ. ಕಾರಂತರಂಥ ನಿರ್ದೇಶಕರಿಂದ ಅನೇಕ ಪ್ರದರ್ಶನಗಳನ್ನು ಕಂಡಿದೆ. ಶ್ರೀ ದುಬೆಯವರ ಹಿಂದೀ ಪ್ರದರ್ಶನದಲ್ಲಿ ಶ್ರೀ ಅಮೋಲ ಪಾಲೇಕರ, ದಿ. ಅಮರೀಶಪುರಿ ಶ್ರೀಮತಿ ಸುನೀತಾ ಪ್ರಧಾನ ಮುಂತಾದವರು ಪಾತ್ರವಹಿಸಿ, ಈ ನಾಟಕದ ಪ್ರದರ್ಶನ ಅತ್ಯಂತ ಯಶಸ್ವಿಯಾಗಲು ಮತ್ತು ಬಹುಕಾಲ ಜನರ ಮನಸ್ಸಿನಲ್ಲಿ ಬೇರೂರಲು ಕಾರಣವಾಯಿತು. ಕಳೆದ ನಾಲ್ಕು ದಶಕಗಳಿಂದಲೂ ಅಲ್ಲಲ್ಲಿ ಪ್ರದರ್ಶನಗೊಳ್ಳುತ್ತಲೇ ಇರುವ ಸಾರ್ವಕಾಲಿಕ ನಾಟಕ ಎಂದರೂ ಅಡ್ಡಿ ಇಲ್ಲ. ಈಗಾಗಲೇ ಅನೇಕ ಪುನರ್ ಮುದ್ರಣಗಳನ್ನು ಕಂಡಿದೆ.
Reviews
There are no reviews yet.