ಸುಮಾರು ಎಂಭತ್ತು-ತೊಂಬತ್ತು ವರ್ಷಗಳ ಹಿಂದೆ ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಒಂದಾಗಿ ಹೋರಾಡುತ್ತಿತ್ತು. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿರಲಿಲ್ಲ. ರಾಜಕೀಯದಷ್ಟೇ ಸಾಂಸ್ಕೃತಿಕವಾಗಿಯೂ ತನ್ನ ಹಿರಿಮೆಯನ್ನು ಕರ್ನಾಟಕ ಮೆರೆದಿತ್ತು. ಉತ್ತರ ಕರ್ನಾಟಕದಲ್ಲಿ ಅನೇಕ ಹಿರಿ-ಕಿರಿಯ ಲೇಖಕರು, ಬರಹಗಾರರು ತಮ್ಮ ಬರಹಗಳ ಮೂಲಕ ಜನ ಜಾಗೃತಿಯಲ್ಲಿ ತೊಡಗಿದ್ದರು. ದ.ರಾ. ಬೇಂದ್ರೆ ಪ್ರಮುಖರಲ್ಲಿ ಒಬ್ಬರು. ತಮ್ಮ ಸಮಾನ ಮನಸ್ಕರ ಜತೆ ಸೇರಿಕೊಂಡು ಗೆಳೆಯರ ಗುಂಪು ಸ್ಥಾಪಿಸಿದರು. ಈ ಗೆಳೆಯರ ಗುಂಪಿನ ಸಾಧನೆ ಇಂದಿಗೂ ಒಂದು ಇತಿಹಾಸ. ಸ್ವಲ್ಪೇ ದಿನ ಕಾರ್ಯ ವಹಿಸಿದರೂ ಗೆಳೆಯರ ಗುಂಪು ಸಾಂಸ್ಕೃತಿಕವಾಗಿ ಬಹು ದೊಡ್ಡ ಹೆಸರನ್ನು ಮಾಡಿತು. ಈ ಗುಂಪಿನ ಸದಸ್ಯರೆಲ್ಲ ನಂತರ ದಿನಗಳಲ್ಲಿ ಪ್ರಖ್ಯಾತ ಲೇಖಕರಾದರು. ಸಾಧನೆ ಇಲ್ಲಿಯೇ ನಿಲ್ಲಲಿಲ್ಲ. ದ.ರಾ. ಬೇಂದ್ರೆ ನಂತರದ ದಿನಗಳಲ್ಲೂ ನೂರಾರು ಲೇಖಕರಿಗೆ ಮಾರ್ಗದರ್ಶಕರಾದರು. ಸ್ವಧರ್ಮ ಮತ್ತು ಜಯ ಕರ್ನಾಟಕ ಪತ್ರಿಕೆಗಳು ಗೆಳೆಯರ ಗುಂಪಿನ ಪತ್ರಿಕೆಗಳು. ನಾಡ ಹಬ್ಬ ಆಚರಿಸಿದ ಹೆಮ್ಮೆ ಗೆಳೆಯರ ಗುಂಪಿಗೆ. ಈ ಎಲ್ಲ ಸಾಧನೆ, ಆದರ್ಶಗಳೇ ಮನೋಹರ ಗ್ರಂಥಮಾಲೆಯ ಸ್ಥಾಪನೆಗೆ ಕಾರಣವಾದವು.
- -10%
ಯುದ್ದ ಯೋಧ
0Original price was: ₹150.00.₹135.00Current price is: ₹135.00.ಯುದ್ದ ಯೋಧ
ಈ ಪುಸ್ತಕವು ಭಾರತೀಯ ಸೇನೆಯನ್ನು ಪರಿಚಯಿಸುತ್ತದೆ. - -10%
ಉಮೇದುವಾರರು
0Original price was: ₹250.00.₹225.00Current price is: ₹225.00.ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ. - -10%
ಸೊನಾಟಾ, ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ
0Original price was: ₹120.00.₹108.00Current price is: ₹108.00.ಸೊನಾಟಾ ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ:
ಶ್ರೀ ಮಹೇಶ ಎಲಕುಂಚವಾರ ಅವರ ‘ಸೊನಾಟಾ ಧರ್ಮ ಪುತ್ರ ವಾಸಾಂಸಿ ಜೀರ್ಣಾನಿ ‘ ಮರಾಠಿ ನಾಟಕವನ್ನು ಗಿರೀಶ ಕಾರ್ನಾಡರು ಕನ್ನಡಕ್ಕೆ ಅನುವಾದಿಸಿದ್ದಾರೆ .
- -10%
ಎ. ಕೆ. ರಾಮಾನುಜನ್ ಸಮಗ್ರ
0Original price was: ₹650.00.₹585.00Current price is: ₹585.00.ಎ. ಕೆ. ರಾಮಾನುಜನ್ ಸಮಗ್ರ
ಈ ಪುಸ್ತಕವು ಅವರ ಕಥೆ , ಕಾದಂಬರಿ,, ನಾಟಕ, ಕವನ ಸಂಕಲನಗನ್ನು ಒಳಗೊಂಡಿದೆ. - -10%
ಮರುಭೂಮಿಯ ಹೂ
0Original price was: ₹130.00.₹117.00Current price is: ₹117.00.“ಕುವೆಂಪು ಭಾಷಾ ಭಾರತಿ ಪ್ರಾಧಿಕಾರ” ಪ್ರಶಸ್ತಿ ವಿಜೇತ ಕೃತಿ
ಕನ್ನಡ ಅನುವಾದ
ಡಾ. ಎನ್. ಜಗದೀಶ್ ಕೊಪ್ಪಸೋಮಾಲಿಯಾದ ಹೆಣ್ಣು ಮಗಳು ವಾರಿಸ್ ಡೀರೀಳ ಆತ್ಮಕಥೆ “ಮರುಭೂಮಿಯ ಹೂ”.
- -10%
ಬಿಳಿ ಸಾಹೇಬನ ಭಾರತ
0Original price was: ₹90.00.₹81.00Current price is: ₹81.00.ಬಿಳಿ ಸಾಹೇಬನ ಭಾರತ
ಈ ಪುಸ್ತಕವು ಎನ್ ಜಗದೀಶ್ ಕೊಪ್ಪ ಅವರು ಅನುವಾದಿಸಿದ ಜಿಮ್ ಕಾರ್ಬೆಟ್ ಅವರ
ಜೀವನಗಾಥೆ.