ಸುಮಾರು ಎಂಭತ್ತು-ತೊಂಬತ್ತು ವರ್ಷಗಳ ಹಿಂದೆ ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಒಂದಾಗಿ ಹೋರಾಡುತ್ತಿತ್ತು. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿರಲಿಲ್ಲ. ರಾಜಕೀಯದಷ್ಟೇ ಸಾಂಸ್ಕೃತಿಕವಾಗಿಯೂ ತನ್ನ ಹಿರಿಮೆಯನ್ನು ಕರ್ನಾಟಕ ಮೆರೆದಿತ್ತು. ಉತ್ತರ ಕರ್ನಾಟಕದಲ್ಲಿ ಅನೇಕ ಹಿರಿ-ಕಿರಿಯ ಲೇಖಕರು, ಬರಹಗಾರರು ತಮ್ಮ ಬರಹಗಳ ಮೂಲಕ ಜನ ಜಾಗೃತಿಯಲ್ಲಿ ತೊಡಗಿದ್ದರು. ದ.ರಾ. ಬೇಂದ್ರೆ ಪ್ರಮುಖರಲ್ಲಿ ಒಬ್ಬರು. ತಮ್ಮ ಸಮಾನ ಮನಸ್ಕರ ಜತೆ ಸೇರಿಕೊಂಡು ಗೆಳೆಯರ ಗುಂಪು ಸ್ಥಾಪಿಸಿದರು. ಈ ಗೆಳೆಯರ ಗುಂಪಿನ ಸಾಧನೆ ಇಂದಿಗೂ ಒಂದು ಇತಿಹಾಸ. ಸ್ವಲ್ಪೇ ದಿನ ಕಾರ್ಯ ವಹಿಸಿದರೂ ಗೆಳೆಯರ ಗುಂಪು ಸಾಂಸ್ಕೃತಿಕವಾಗಿ ಬಹು ದೊಡ್ಡ ಹೆಸರನ್ನು ಮಾಡಿತು. ಈ ಗುಂಪಿನ ಸದಸ್ಯರೆಲ್ಲ ನಂತರ ದಿನಗಳಲ್ಲಿ ಪ್ರಖ್ಯಾತ ಲೇಖಕರಾದರು. ಸಾಧನೆ ಇಲ್ಲಿಯೇ ನಿಲ್ಲಲಿಲ್ಲ. ದ.ರಾ. ಬೇಂದ್ರೆ ನಂತರದ ದಿನಗಳಲ್ಲೂ ನೂರಾರು ಲೇಖಕರಿಗೆ ಮಾರ್ಗದರ್ಶಕರಾದರು. ಸ್ವಧರ್ಮ ಮತ್ತು ಜಯ ಕರ್ನಾಟಕ ಪತ್ರಿಕೆಗಳು ಗೆಳೆಯರ ಗುಂಪಿನ ಪತ್ರಿಕೆಗಳು. ನಾಡ ಹಬ್ಬ ಆಚರಿಸಿದ ಹೆಮ್ಮೆ ಗೆಳೆಯರ ಗುಂಪಿಗೆ. ಈ ಎಲ್ಲ ಸಾಧನೆ, ಆದರ್ಶಗಳೇ ಮನೋಹರ ಗ್ರಂಥಮಾಲೆಯ ಸ್ಥಾಪನೆಗೆ ಕಾರಣವಾದವು.
- -10%
ಹಿಡಿಯದ ಹಾದಿ
0Original price was: ₹100.00.₹90.00Current price is: ₹90.00.ಹಿಡಿಯದ ಹಾದಿ
(ಲಲಿತ ಪ್ರಬಂಧಗಳು)ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು, ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.
- -10%
ಮದುವೆಯ ಆಲ್ಬಮ್
0Original price was: ₹100.00.₹90.00Current price is: ₹90.00.ಮದುವೆಯ ಆಲ್ಬಮ್
– ನಾಟಕ –ಮದುವೆಯ ಅಲ್ಬಮ್ ಸಮಕಾಲೀನ ಜೀವನದ ಬಗ್ಗೆ ಗಿರೀಶ ಕಾರ್ನಾಡ ಅವರು ಬರೆದ ನಾಟಕ. ಇದರಲ್ಲಿರುವುದು ಸಮಕಾಲೀನ ಸಂವೆದನೆಯೇ ಹೊರತು ವಿಷಯವಲ್ಲ ಎಂದು ಗಿರೀಶ ಕಾರ್ನಾಡರ ಅಭಿಪ್ರಾಯ.
‘ಮದುವೆಯ ಆಲ್ಬಮ್’ ನಾಟಕದ ಮೊದಲನೆಯ ಪ್ರಯೋಗವನ್ನು Prime Time Theatre Company ಅವರು ಇಂಗ್ಲಿಷ್ ನಲ್ಲಿ Wedding Album ಎಂಬ ಹೆಸರಿನಲ್ಲಿ ಮುಂಬಯಿಯ National Centre for the Performing Arts ಅವರ ಟಾಟಾ ನಾಟ್ಯಗೃಹದಲ್ಲಿ ಶನಿವಾರ ೧೦ಮೇ ೨೦೦೮ರಂದು ಸಾದರಪಡಿಸಿದರು.
- -10%
ಬೆಂದ ಕಾಳು ಆನ್ ಟೋಸ್ಟ್
0Original price was: ₹120.00.₹108.00Current price is: ₹108.00.ಬೆಂದ ಕಾಳು ಆನ್ ಟೋಸ್ಟ್
ಒಂದು ಆಖ್ಯಾಯಿಕೆಯ ಪ್ರಕಾರ ಅರಸ ವೀರ ಬಲ್ಲಾಳ ಬೇಟೆಗೆಂದು ಹೊರಟವನು ಕಾಡಿನಲ್ಲಿ ದಾರಿ ತಪ್ಪಿ, ರಾತ್ರಿಯಿಡೀ ಸುತ್ತಾಡಿ ಹಸಿದು ಬಳಲಿ ಬಸವಳಿದಾಗ, ಒಬ್ಬ ಮುದುಕಿ ಅವನಿಗೆ ಬೆಂದ ಕಾಳುಗಳನ್ನು ನೀಡಿ ಅವನ ಪ್ರಾಣ ಉಳಿಸಿದಳು. ಆ ಉಪಕಾರವನ್ನು ಸ್ಮರಿಸಿ ಅರಸ ಆ ಸ್ಥಾನದಲ್ಲಿ ‘ಬೆಂದಕಾಳೂರು’ ಎಂಬ ಊರನ್ನು ಸ್ಥಾಪಿಸಿದ. ಅದೇ ಮುಂದೆ ‘ಬೆಂಗಳೂರು’ ಆಯಿತು.
- -10%
ಸಾಹಿತ್ಯಲೋಕದ ಸುತ್ತ-ಮುತ್ತ
0Original price was: ₹150.00.₹135.00Current price is: ₹135.00.ತುಂಬಾ ಗಂಭೀರ ಧಾಟಿಯ ನಿಷ್ಠುರ ವಿಮರ್ಶಕರೆಂದೇ ಪ್ರಸಿದ್ಧರಾಗಿರುವ ಗಿರಡ್ಡಿ ಗೋವಿಂದರಾಜರ ವ್ಯಕ್ತಿತ್ವ ಮತ್ತು ಬರವಣಿಗೆಯ ಮತ್ತೊಂದು ಮುಖ್ಯ ಆಯಾಮವನ್ನು ತೋರುವ ಕೃತಿ ”ಸಾಹಿತ್ಯ ಲೋಕದ ಸುತ್ತ–ಮುತ್ತ ”. ಪಠ್ಯ ಕೇಂದ್ರಿತ ವಿಮರ್ಶಕ ಈಗ ಪಠ್ಯದ ಸುತ್ತಮುತ್ತಲೂ ನೋಡುತ್ತಿದ್ದಾನೆ.
- -10%
ಹೊಳೆಮಕ್ಕಳು
0Original price was: ₹200.00.₹180.00Current price is: ₹180.00.ಇದು ಬಿದರಹಳ್ಳಿ ನರಸಿಂಹ ಮೂರ್ತಿಯವರ ಕಾದಂಬರಿ.
- -10%
ತಂತ್ರಯೋನಿ
0Original price was: ₹375.00.₹338.00Current price is: ₹338.00.ತಂತ್ರಯೋನಿ :
‘ತಂತ್ರಯೋನಿ’ ಗ್ರಂಥ ತಂತ್ರದ ಶಾಸ್ತ್ರವನ್ನು ಕುರಿತು ವಿವರವಾಗಿ ಹೇಳುತ್ತದೆ. ತಂತ್ರ ಒಂದು ರಹಸ್ಯವಿದ್ಯೆ. ಈ ವಿದ್ಯೆಯನ್ನು ಗುರುವಿನಿಂದ ಪಡೆಯಲು ಶಿಷ್ಯ ಅಧಿಕಾರಿಯಾಗಿರಬೇಕು. ‘ಅಶಿಷ್ಯಾಯ ನ ದೇಯಂ’ ಎನ್ನುವದು ಇಂಥ ವಿದ್ಯೆಗಳಿಗೆ ಒಂದು ನಿಷೇಧವಾಕ್ಯ. ದೀಕ್ಷೆ, ಧ್ಯಾನ, ಜಪ, ಮಂತ್ರ ಮೊದಲಾದವುಗಳು ಕೂಡ ತಂತ್ರವಿದ್ಯೆಯ ಅಂಗಗಳಾಗಿರುವುದರಿಂದ ಅವುಗಳನ್ನು ಕುರಿತು ಸಾಕಷ್ಟು ವಿವರಗಳನ್ನು ಈ ಗ್ರಂಥದಲ್ಲಿ ನೀಡಲಾಗಿದೆ.
- -10%
ಮುಖಾಂತರ
0Original price was: ₹550.00.₹495.00Current price is: ₹495.00.ಮುಖಾಂತರ
‘ಮುಖಾಂತರ’ ಸಾವಧಾನದ ಲಯದಲ್ಲಿ ನಿರೂಪಿತವಾಗಿರುವ ಕಾದಂಬರಿ. ಇತ್ತೀಚೆಗೆ ಅಪರೂಪವಾಗುತ್ತಿರುವ ಈ ಲಯವೇ ಈ ಕಾದಂಬರಿಯ ಆಶಯ ಆಕೃತಿಯನ್ನು ರೂಪಿಸಿದೆ. ಹೀಗಾಗಿ ವೇಗಕ್ಕೆ ದಕ್ಕದ ಅನೇಕ ಸೂಕ್ಷ್ಮಗಳು ಈ ಕಾದಂಬರಿಯ ಬಂಧದಲ್ಲಿ ಸಹಜವೆಂಬಂತೆ ಸೇರಿಕೊಂಡಿವೆ. ದಟ್ಟ ಜೀವನಾನುಭವದ ಹೆಣಿಗೆಯಲ್ಲಿ ಸಿದ್ಧವಾಗಿರುವ ‘ಮುಖಾಂತರ’ದಲ್ಲಿ ಮೊಗಸಾಲೆಯವರು ಒಂದು ಕುಟುಂಬದ ಕತೆಯನ್ನು ಹೇಳುತ್ತಲೇ ನಾಡಿನ ಜಗತ್ತಿನ ವಿದ್ಯಮಾನಗಳನ್ನು ಹಾಸು ಹೊಕ್ಕಾಗಿ ಸೇರಿಸಿದ್ದಾರೆ. ಸ್ಥಳೀಯ ಸತ್ವವನ್ನು ಒಳಗೊಳ್ಳುತ್ತಲೇ ಜಾಗತಿಕ ಆಗು ಹೋಗುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ‘ಮುಖಾಂತರ’ದ ವಿಸ್ತಾರ ಬೆರಗು ಮೂಡಿಸುತ್ತದೆ.
ಸಂಬಂಧಗಳ ಜಟಿಲತೆ, ಸ್ತ್ರೀ ಜಗತ್ತಿನ ತಲ್ಲಣಗಳು, ಆಸ್ತಿ ಅಧಿಕಾರದ ದರ್ಪ, ಅಂತಃಕರಣ ಜಗತ್ತಿನ ಆರ್ದ್ರತೆ. ಜಾಗತೀಕರಣ ಕಬಂಧ ಬಾಹು, ಆಕಸ್ಮಿಕಗಳು ಬದುಕನ್ನು ರೂಪಿಸುವ ವಿಸ್ಮಯ, ವರ್ಗ ಸಂಘರ್ಷ ಅನಿಯಂತ್ರಿತ ಆಕರ್ಷಣೆಯ ಸ್ವರೂಪ. ಈ ಎಲ್ಲವನ್ನೂ ಮೀರಿದ ನಿರ್ಲಿಪ್ತತೆ ಹೀಗೆ ಹಲವು ನೆಲೆಗಳನ್ನು ಒಳಗೊಂಡಿದೆ. - -10%
ಹೂವು, ಒಡಕಲು ಬಿಂಬ ಮತ್ತು ಇತರ ನಾಟಕಗಳು
0Original price was: ₹70.00.₹63.00Current price is: ₹63.00.ಹೂವು, ಒಡಕಲು ಬಿಂಬ ಮತ್ತು ಇತರ ನಾಟಕಗಳು:
“ಹೂವು, ಒಡಕಲು ಬಿಂಬ” ಗಿರೀಶ ಕಾರ್ನಾಡ ಅವರು ಗ್ರಂಥಮಾಲೆಗಾಗಿ ರಚಿಸಿದ ನಾಟಕಗಳ ಸಂಕಲನ. ಇದರಲ್ಲಿ ಹೂವು (ಭಾಷಣ ರೂಪಕ), ಒಡಕಲು ಬಿಂಬ (ನಾಟಕ), ಮಾನಿಷಾದ (ನಾಟಕ) ಮತ್ತು ಮಹೇಶ ಎಲಕುಂಚವಾರ ಅವರ ಎರಡು ಅನುವಾದಿತ ನಾಟಕಗಳು “ವಾಸಾಂಸಿ ಜೀರ್ಣಾನಿ” ಮತ್ತು “ಧರ್ಮ ಪುತ್ರ” ಸೇರಿವೆ.
- -10%
ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚೂರೀ….
0Original price was: ₹120.00.₹108.00Current price is: ₹108.00.ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚೂರೀ….
ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚುರೀ ಇವು ಎರಡು ನಾಟಕಗಳಾಗಿದ್ದು , ಇವೆರಡು ನಾಟಕಗಳಿಗೆ ಪ್ರೇರಣೆ ಫ್ರೆಂಚ್ ಪ್ರಹಸನಕಾರ ಮೊಲಿಯರನದ್ದು. ‘ಆಚಾರ್ಯ ಪ್ರಹಸನ’ವು ಮೋಲಿಯರನ ‘ಲೆ ತಾರ್ ತೂಫ್’ ನಾಟಕದಿಂದಲೂ. ‘ಏನ್ ಹುಚ್ಚೂರೀ….’ ನಾಟಕವು ‘ಬೂರ್ಜ್ವಾ ದಿ ಜಂಟಲ್ ಮನ್’ ನಾಟಕದಿನ್ದಲೂ ಪ್ರಭಾವಿತವಾಗಿವೆ. ಈ ಎರಡು ನಾಟಕಗಳನ್ನು ಅಭಿನಯಿಸುವುದು ಸುಲಭವಲ್ಲ. ನಾಟಕಕಾರ ಹಾಗೂ ನಿರ್ದೇಶಕರ ಮೇಲೆ ಕಲಾತ್ಮಕ ನಿರ್ಬಂಧ ಹೀರಾ ಬಲ್ಲ ಕೃತಿಗಳಿವು.